ಮೈಸೂರು: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.
ಅವರು ಬುಧವಾರ(ಆ.7) ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿರುವುದರಿಂದ ರಾಜ್ಯಪಾಲರು ಸರ್ಕಾರದ ಉತ್ತರವನ್ನು ಒಪ್ಪಿಕೊಳ್ಳುವ ನಂಬಿಕೆಯಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ ಎಂದು ಅವರು ಹೇಳಿದರು.
2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನನ್ನ ಪತ್ನಿ, ಮುಡಾ ಅಕ್ರಮವಾಗಿ ನಮ್ಮ ಜಮೀನು ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬದಲಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದಳು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ.
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಆಪಾದನೆಗಳನ್ನು ಮಾಡುತ್ತಿವೆ. ಆಪರೇಶನ್ ಕಮಲ ನಡೆಸಲು ಪ್ರಯತ್ನಿಸಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಇದನ್ನು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರು.
ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂದು ಸ್ವತಃ ಪ್ರಧಾನಿಯವರೇ ಹೇಳಿದ್ದರು. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆ ವಿರುದ್ಧವಾಗಿ ಅವರು ಮಾತನಾಡುತ್ತಿದ್ದಾರೆ. ಒಂದು ವೇಳೆ ಗ್ಯಾರಂಟಿ ಯೋಜನೆ ಆರಂಭಿಸಿದರೂ, ಅದನ್ನು ನಿಲ್ಲಿಸಿ ಬಿಡುತ್ತಾರೆ ಎಂದಿದ್ದರು. ಆದರೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಅವರು ಹತಾಶರಾಗಿದ್ದಾರೆ ಎಂದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…