ಮೈಸೂರು

ನಮ್ಮಲ್ಲಿ ಒಳಜಗಳ ಇದ್ದಿದ್ದರೆ ಒಗ್ಗಟ್ಟಿನಿಂದ ಕೆಲಸ ಮಾಡಲು ಆಗುತ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ನಮ್ಮಲ್ಲಿ ಒಳ ಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿಂದು ಹೇಳಿದರು.

ನಗರದ ಮಂಡಕ್ಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಈ ಬಾರಿ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆತಿದ್ದು, ಪರಿಷತ್ ಚುನಾವಣೆಯಲ್ಲಿ ಉತ್ತಮ ವಾತಾವರಣವಿದೆ ಎಂದರು.

ಮೈತ್ರಿ ಪರಿಣಾಮ ಚುನಾವಣೆಯ ಮೇಲೆ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಲೋಕಸಭೆ ಚುನಾವಣೆಯಲ್ಲಿಯೂ ಕೆಡಿಎಎ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ, ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ರಾಜಕೀಯವಾಗಿ ಪ್ರಬುದ್ಧರಾಗಿರುವವರು. ಯಾವುದು ಸರಿ, ಯಾವುದು ತಪ್ಪು ಎನ್ನುವ ಬಗ್ಗೆ ಅರಿವು ಹೊಂದಿದವರು. ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ತುಲನೆ ಮಾಡುವ ಶಕ್ತಿ ಅವರಿಗಿದೆ ಎಂದು ಉತ್ತರಿಸಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಪೆನ್ ಡ್ರೈವ್ ಇದ್ದು, ತನಿಖೆ ಮಾಡಿಸುವ ತಾಕತ್ತು ಸರ್ಕಾರಕ್ಕಿದೆ ಎಂದರೆ ಬಿಡುಗಡೆ ಮಾಡುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿಯವರದ್ದು ಸದಾ ಹಿಟ್ ಅಂಡ್ ರನ್ ಕೇಸ್ ಎಂದು ವ್ಯಂಗ್ಯವಾಡಿದರು.

ಇನ್ನು ಕರ್ನಾಟಕದಲ್ಲಿ ಆಪರೇಷನ್‌ ಕಮಲ ಆಗಲಿದೆ ಎಂಬ ಮಹಾರಾಷ್ಟ್ರ ಸಿಎಂ ಶಿಂಧೆ ಹೇಳಿಕೆಗೆ, ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಬದಲು ಅವರ ಸರ್ಕಾರವನ್ನು ಮೊದಲು ಉಳಿಸಿಕೊಳ್ಳಲಿ ಎಂದು ಟಾಂಗ್‌ ನೀಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 14 ಗುರುವಾರ

2 mins ago

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

13 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

14 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

14 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

15 hours ago

ಸದ್ಯಕ್ಕೆ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಚಿಂತನೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…

15 hours ago