ಮೈಸೂರು

ಮೈಸೂರು ನಗರವನ್ನು ಶೀಘ್ರವೇ ಪ್ಲಾಸ್ಟಿಕ್ ಮುಕ್ತಗೊಳಿಸುವ ಸಂಕಲ್ಪ ಕೈಗೊಂಡಿದ್ದೇವೆ : ಈಶ್ವರ್ ಖಂಡ್ರೆ

ಮೈಸೂರು : ಮೈಸೂರು ನಗರ ಸೇರಿದಂತೆ ರಾಜ್ಯದ ಐದು ನಗರಗಳನ್ನು ಪ್ಲಾಸ್ಟಿಕ್ ಮುಕ್ತ ಗೊಳಿಸುವುದಾಗಿ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಮೈಸೂರಿನ ಸುತ್ತೂರು ಶಾಖಾಮಠದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಯವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಅಷ್ಟೇ ಅಲ್ಲ ವಿಶ್ವಾದ್ಯಂತ ಪ್ಲಾಸ್ಟಿಕ್ ಅತಿ ದೊಡ್ಡ ಸಮಸ್ಯೆಯಾಗಿದೆ, ಪ್ಲಾಸ್ಟಿಕ್ ತ್ಯಾಜ್ಯದಿಂದ ನೂರಾರು ಸಮಸ್ಯೆಗಳು ತಲೆ ದೋರುತ್ತಿವೆ, ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಮುಕ್ತ ಮಾಡುವ ಸಂಕಲ್ಪವನ್ನು ಸರ್ಕಾರ ಕೈಗೊಂಡಿದೆ ಎಂದರು.

ವಿಶ್ವ ಪರಿಸರ ದಿನದಂದು 5 ನಗರಗಳನ್ನ ಏಕಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲು ಸಂಕಲ್ಪ ಮಾಡಿದ್ದು ಅದರಂತೆ ಕಲ್ಬುರ್ಗಿ ಬೀದರ್, ಮೈಸೂರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಮೊದಲ ಹಂತದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡುವುದಾಗಿ ಸಚಿವರು ತಿಳಿಸಿದರು.

ಬಂಡಿಪುರ ಅರಣ್ಯ ವಿಭಾಗದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಕುಮಾರ್ ಎಂಬುವರು ಭ್ರಷ್ಟಾಚಾರ ಎಸೆಗಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು ಈ ಬಗ್ಗೆ ಶಾಸಕ ಗಣೇಶ್ ಪ್ರಸಾದ್ ಅವರ ದೂರಿನ ಅನ್ವಯ ಈಗಾಗಲೇ ತನಿಖೆಗೆ ಆದೇಶಿಸಲಾಗಿದ್ದು ವರದಿ ಬಂದ ನಂತರ ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಮ್ಮ ಇಲಾಖೆಯಲ್ಲಿ ಭ್ರಷ್ಟ ಮುಕ್ತ ಪಾರದರ್ಶಕ ಆಡಳಿತ ನೀಡಲು ಸಂಕಲ್ಪ ಮಾಡಿದ್ದು ಈಗಾಗಲೇ ಭ್ರಷ್ಟಾಚಾರ ಆರೋಪದ ಮೇಲೆ ಇಬ್ಬರು ಡಿ.ಸಿ.ಎಫ್ ಗಳನ್ನು ಅಮಾನತು ಮಾಡಲಾಗಿದೆ. ಈ ರೀತಿ ಪ್ರಕರಣಗಳು ಎಲ್ಲೇ ವರದಿಯಾದರೂ ನಿರ್ಧಾಕ್ಷಿಣ್ಯವಾಗಿ ಕ್ರಮ ಜರುಗಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ಮಾನವ ಮತ್ತು ವನ್ಯಜೀವಿಗಳ ಸಂಘರ್ಷದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು ರಾಜ್ಯ ಸರ್ಕಾರ ಈಗಾಗಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ ಪ್ರತಿಯೊಬ್ಬ ಮನುಷ್ಯನ ಜೀವವೂ ಅತ್ಯಮೂಲ್ಯ, ವನ್ಯಜೀವಿಗಳಿಂದ ಮಾನವ ಪ್ರಾಣ ಹಾನಿ ಆಗದಂತೆ ಕ್ರಮವಹಿಸಲು ಇಲಾಖೆಗೆ ಸೂಚಿಸಲಾಗಿದೆ ಆನೆಗಳ ಹಾವಳಿ ಇರುವ ಕಡೆ ಆನೆಗಳನ್ನು ತಕ್ಷಣವೇ ಕಾಡಿಗೆ ಅಟ್ಟಲು ಎರಡು ಹೊಸ ಕಾರ್ಯಪಡೆಗಳನ್ನು ರಚಿಸಲಾಗಿದೆ ಎಂದರು.

ರೈಲ್ವೆ ಬ್ಯಾರಿಕೇಡ್ ನಿರ್ಮಿಸಿ ಆನೆಗಳು ನಾಡಿಗೆ ಬಾರದಂತೆ ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಗಳು ಈ ಬಾರಿಯ ಬಜೆಟ್ ನಲ್ಲಿ ಇದಕ್ಕೆ 120 ಕೋಟಿ ರೂ ಹಂಚಿಕೆ ಮಾಡಿದ್ದಾರೆ ಎಂದು ತಿಳಿಸಿದರು.

ತಾವು ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಸುತ್ತೂರು ಶ್ರೀಗಳ ದರ್ಶನ ಮಾಡಲು ಬಂದಿದ್ದು ಅವರ ಆಶೀರ್ವಾದ ಪಡೆದುದಾಗಿ ತಿಳಿಸಿದರು.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

8 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

13 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

14 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

14 hours ago