ಮೈಸೂರು

ದೇಶ ವಿಚಾರದಲ್ಲಿ ಜಾತಿ,ಧರ್ಮ ಬಿಟ್ಟು ಒಟ್ಟಾಗಬೇಕು : ಎಂಎಲ್‌ಸಿ ಮಂಜೇಗೌಡ

ಮೈಸೂರು : ದೇಶದ ವಿಚಾರ ಬಂದಾಗ ಯಾವುದೇ ಪಕ್ಷ, ಜಾತಿ ಧರ್ಮ ಬಿಟ್ಟು ಎಲ್ಲರೂ ಒಟ್ಟಾಗಿ ನಿಲ್ಲಬೇಕು. ಆದರೆ, ಈ ವಿಚಾರದಲ್ಲಿ ಅಪಸ್ವರ ಎತ್ತುವವರು ನಿಜವಾಗಿಯೂ ದೇಶ ದ್ರೋಹಿಗಳು ಎಂದು ಎಂಎಲ್‌ಸಿ ಮಂಜೇಗೌಡ
ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿಗೆ ನಡೆದ ಕಾಶ್ಮೀರದ ಉಗ್ರರ ದಾಳಿಯನ್ನ ತೀವ್ರವಾಗಿ ಖಂಡಿಸಿ ಉಗ್ರರ ಸದೆ ಬಡಿಯಲು ನಿಂತಿರುವ ಪ್ರಧಾನಿ ಮೋದಿಯ ಬೆನ್ನಿಗೆ ದೇವೇಗೌಡರು ನಿಂತಿದ್ದಾರೆ. ಇಂತಹ ಸಂಧರ್ಭದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಆಪರೇಷನ್ ಸಿಂಧೂರವನ್ನ ಲೇವಡಿ ಮಾಡುತ್ತಿದ್ದಾರೆ. ಇದು ಬಹಳ ಖಂಡನೀಯ ಎಂದರು.

ಎಚ್.ಡಿ ದೇವೇಗೌಡರು ದೇಶ ಕಂಡ ಧೀಮಂತ ನಾಯಕ. ಪ್ರಧಾನಿಯಾಗಿದ್ದ ಸಂಧರ್ಭದಲ್ಲಿ ತೆರೆದ ವಾಹನದಲ್ಲಿ ಜಮ್ಮುಕಾಶ್ಮೀರಕ್ಕೆ ಭೇಟಿ ನೀಡಿದ್ದ ಧೀರ ಪ್ರಧಾನಿ. ಅವರ ನೆರಳಿನಲ್ಲಿ ನಮ್ಮ ರಾಜ್ಯದಲ್ಲಿರುವ ಹಲವಾರು ರಾಜಕೀಯ ನಾಯಕರಯ ರಾಜಕೀಯ ಭವಿಷ್ಯ ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು.

ಇಂದು 50 ವರ್ಷ ಬದುಕೋದೆ ಹೆಚ್ಚು. ಆದರೆ, ಅವರು 93ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ದೇವೇಗೌಡರಿಗೆ ನಾಡ ದೇವತೆ ಇನ್ನಷ್ಟು ಆಯಸ್ಸು ಆರೋಗ್ಯ ಕೊಡಲಿ. ನಮ್ಮ ನಾಡಿಗೆ ಅವರು ಇರೋದು ಹೆಮ್ಮೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

9 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

23 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

23 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

23 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

23 hours ago