ಮೈಸೂರು : ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಗಲಭೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೋಂದಿಗೆ ಮಾತನಾಡಿದ ಅವರು, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮಾಡುವ ವೇಳೆ ನಡೆದಿರುವ ಘಟನೆ ಹಿಂಸಾತ್ಮಕ. ಅದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.
ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಾನೂನಿನ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಎಲ್ಲಾ ಧರ್ಮದ ಜನರು ಶಾಂತಿಯುತವಾಗಿ ಬಾಳಬೇಕು. ಸಾಮಾಜದಲ್ಲಿ ವಿವಿಧ ಧಾರ್ಮಿಕ ಸ್ಥಳಗಳು ಇವೆ.
ಮೆರವಣಿಗೆ ಮಾಡುವುದು ರಸ್ತೆಯಲ್ಲಿ. ಆದ್ದರಿಂದ ಅದು ಸಾರ್ವಜನಿಕ ಆಸ್ತಿ. ಸಾರ್ವಜನಿಕ ಕಾನೂನು ಎಲ್ಲರಿಗೂ ಒಂದೆ. ಅದನ್ನು ಅರಿತು ಎಲ್ಲರೂ ಶಾಂತಿಯುತವಾಗಿ ಜೀವನ ನಡೆಸಬೇಕು ಎಂದು ಹೇಳಿದರು.
ಸೋಮಣ್ಣ ನೇತೃತ್ವದಲ್ಲಿ ಒಳ್ಳೆ ಕೆಲಸ ಮಾಡುತ್ತೇವೆ : ಯದುವೀರ್
ಕೇಂದ್ರ ಸಚಿವರಾದ ವಿ.ಸೋಮಣ್ಣ ಅವರು ಮಂತ್ರಿಗಳಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ್ದಾರೆ. ಇಂದು ನಗರದ ರೈಲ್ವೆ ಕಚೇರಿಗೆ ಹಾಗೂ ರೈಲ್ವೆ ನಿಲ್ದಾಣಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಈಗಾಗಲೆ ಮೈಸೂರು ಭಾಗದಲ್ಲಿ ಬಹಳಷ್ಟು ಕೆಲಸಗಳು ಆಗಿದೆ. ಮುಂದಿನ ದಿನಗಳಲ್ಲಿ ಒಳ್ಳೆ ಅಭಿವೃದ್ಧಿ ಆಗುವ ಕೆಲಸಗಳು ಇದೆ. ಸಚಿವರಾದ ವಿ.ಸೋಮಣ್ಣ ಅವರ ನೇತೃತ್ವದಲ್ಲಿ ಅದನ್ನು ಮಾಡುತ್ತೇವೆ ಎಂದು ಮೈಸೂರು-ಕೊಡಗು ಸಂಸದರಾದ ಯದುವೀರ್ ಆಶಯ ವ್ಯಕ್ತಪಡಿಸಿದರು.
ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫೆಬ್ರವರಿ.14ರಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳ ನೇತೃತ್ವದಲ್ಲಿ ಹನುಮಾನ್ ಚಾಲೀಸಾ ಪಾರಾಯಣ ಕಾರ್ಯಕ್ರಮ ನಡೆಯಲಿದೆ.…
ಎಚ್.ಡಿ.ಕೋಟೆ: ಶಾರ್ಟ್ ಸರ್ಕ್ಯೂಟ್ನಿಂದ ಸ್ಟೇಷನರಿ ಅಂಗಡಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುಮಾರು 25 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ…
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…