ಮೈಸೂರು : ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಗಲಭೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೋಂದಿಗೆ ಮಾತನಾಡಿದ ಅವರು, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮಾಡುವ ವೇಳೆ ನಡೆದಿರುವ ಘಟನೆ ಹಿಂಸಾತ್ಮಕ. ಅದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.
ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಾನೂನಿನ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಎಲ್ಲಾ ಧರ್ಮದ ಜನರು ಶಾಂತಿಯುತವಾಗಿ ಬಾಳಬೇಕು. ಸಾಮಾಜದಲ್ಲಿ ವಿವಿಧ ಧಾರ್ಮಿಕ ಸ್ಥಳಗಳು ಇವೆ.
ಮೆರವಣಿಗೆ ಮಾಡುವುದು ರಸ್ತೆಯಲ್ಲಿ. ಆದ್ದರಿಂದ ಅದು ಸಾರ್ವಜನಿಕ ಆಸ್ತಿ. ಸಾರ್ವಜನಿಕ ಕಾನೂನು ಎಲ್ಲರಿಗೂ ಒಂದೆ. ಅದನ್ನು ಅರಿತು ಎಲ್ಲರೂ ಶಾಂತಿಯುತವಾಗಿ ಜೀವನ ನಡೆಸಬೇಕು ಎಂದು ಹೇಳಿದರು.
ಸೋಮಣ್ಣ ನೇತೃತ್ವದಲ್ಲಿ ಒಳ್ಳೆ ಕೆಲಸ ಮಾಡುತ್ತೇವೆ : ಯದುವೀರ್
ಕೇಂದ್ರ ಸಚಿವರಾದ ವಿ.ಸೋಮಣ್ಣ ಅವರು ಮಂತ್ರಿಗಳಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ್ದಾರೆ. ಇಂದು ನಗರದ ರೈಲ್ವೆ ಕಚೇರಿಗೆ ಹಾಗೂ ರೈಲ್ವೆ ನಿಲ್ದಾಣಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಈಗಾಗಲೆ ಮೈಸೂರು ಭಾಗದಲ್ಲಿ ಬಹಳಷ್ಟು ಕೆಲಸಗಳು ಆಗಿದೆ. ಮುಂದಿನ ದಿನಗಳಲ್ಲಿ ಒಳ್ಳೆ ಅಭಿವೃದ್ಧಿ ಆಗುವ ಕೆಲಸಗಳು ಇದೆ. ಸಚಿವರಾದ ವಿ.ಸೋಮಣ್ಣ ಅವರ ನೇತೃತ್ವದಲ್ಲಿ ಅದನ್ನು ಮಾಡುತ್ತೇವೆ ಎಂದು ಮೈಸೂರು-ಕೊಡಗು ಸಂಸದರಾದ ಯದುವೀರ್ ಆಶಯ ವ್ಯಕ್ತಪಡಿಸಿದರು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…