ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಗೆ ಬೆಂಬಲ ನೀಡಲಾಗುವುದು ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ. ಮಹದೇವಸ್ವಾಮಿ ಹೇಳಿದ್ದಾರೆ.
ಒಡೆಯರ್ ರಾಜಮನೆತನದದೊಂದಿಗೆ ವಕೀಲರ ಸಂಘ ಅವಿನಾಭಾವ ಸಂಬಂಧ ಹೊಂದಿದೆ. 2004ರಲ್ಲಿ ಸಂಸದರಾಗಿದ್ದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ವಕೀಲರ ಸಂಘಕ್ಕೆ ರೂ. 10 ಲಕ್ಷ ದೇಣಿಗೆ ನೀಡಿದ್ದರು. ಮತ್ತು ಅದೇ ಹಣದಿಂದ ವಕೀಲರ ಸಂಘದ ಕಟ್ಟವನ್ನು ನಿರ್ಮಿಸಲಾಯಿತು ಎಂದು ಅವರು ನೆನೆದರು.
ನಾಲ್ವಡಿ ಕೃಷ್ಣರಾಜ್ ಒಡೆಯರ್ ಕಾಲದಿಂದಲೂ ಮೈಸೂರನ್ನು ಅಭಿವೃದ್ಧಿಪಡಿಸಿದ್ದು ಆ ಸಂಸ್ಥಾನದ ಮಹಾರಾಜರೇ. ಹಾಗೂ ಮೈಸೂರು ಕೋರ್ಟ್ ಕಟ್ಟಡ ಕೂಡಾ ಮಹಾರಾಜರ ದೇಣಿಗೆಯಾಗಿದೆ. ಮೈಸೂರಿನ ಸರ್ವಾಂಗೀಣ ಅಭಿವೃದ್ಧಿಗೆ ಮಹಾರಾಜರು ನೀಡಿರುವ ಕೊಡುಗೆ ಅಪಾರವಾಗಿದೆ. ಹಾಗಾಗಿ ವಕೀಲರ ಸಂಘದ ಎಲ್ಲ ಸದಸ್ಯರು ಪಕ್ಷಭೇದ ಮರೆತು ಯದುವೀರ್ ಯಶಸ್ಸಿಗೆ ಸಹಕರಿಸಲಿದ್ದಾರೆ ಎಂದು ವಕೀಲ ಸಂಘ ಹೇಳಿದೆ ಎಂದು ಟಿವಿ9 ವರದಿ ಮಾಡಿದೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…