ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಗೆ ಬೆಂಬಲ ನೀಡಲಾಗುವುದು ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ. ಮಹದೇವಸ್ವಾಮಿ ಹೇಳಿದ್ದಾರೆ.
ಒಡೆಯರ್ ರಾಜಮನೆತನದದೊಂದಿಗೆ ವಕೀಲರ ಸಂಘ ಅವಿನಾಭಾವ ಸಂಬಂಧ ಹೊಂದಿದೆ. 2004ರಲ್ಲಿ ಸಂಸದರಾಗಿದ್ದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ವಕೀಲರ ಸಂಘಕ್ಕೆ ರೂ. 10 ಲಕ್ಷ ದೇಣಿಗೆ ನೀಡಿದ್ದರು. ಮತ್ತು ಅದೇ ಹಣದಿಂದ ವಕೀಲರ ಸಂಘದ ಕಟ್ಟವನ್ನು ನಿರ್ಮಿಸಲಾಯಿತು ಎಂದು ಅವರು ನೆನೆದರು.
ನಾಲ್ವಡಿ ಕೃಷ್ಣರಾಜ್ ಒಡೆಯರ್ ಕಾಲದಿಂದಲೂ ಮೈಸೂರನ್ನು ಅಭಿವೃದ್ಧಿಪಡಿಸಿದ್ದು ಆ ಸಂಸ್ಥಾನದ ಮಹಾರಾಜರೇ. ಹಾಗೂ ಮೈಸೂರು ಕೋರ್ಟ್ ಕಟ್ಟಡ ಕೂಡಾ ಮಹಾರಾಜರ ದೇಣಿಗೆಯಾಗಿದೆ. ಮೈಸೂರಿನ ಸರ್ವಾಂಗೀಣ ಅಭಿವೃದ್ಧಿಗೆ ಮಹಾರಾಜರು ನೀಡಿರುವ ಕೊಡುಗೆ ಅಪಾರವಾಗಿದೆ. ಹಾಗಾಗಿ ವಕೀಲರ ಸಂಘದ ಎಲ್ಲ ಸದಸ್ಯರು ಪಕ್ಷಭೇದ ಮರೆತು ಯದುವೀರ್ ಯಶಸ್ಸಿಗೆ ಸಹಕರಿಸಲಿದ್ದಾರೆ ಎಂದು ವಕೀಲ ಸಂಘ ಹೇಳಿದೆ ಎಂದು ಟಿವಿ9 ವರದಿ ಮಾಡಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…