ಮೈಸೂರು

ಇಂದಿನ ಕಾಂಗ್ರೆಸ್‌ ಭ್ರಷ್ಟಾಚಾರದ ಮತ್ತೊಂದು ಮುಖವಾಗಿದೆ: ಸಿಟಿ ರವಿ

ಮೈಸೂರು: ದೇಶದ ಅಭಿವೃದ್ಧಿಗೆ ಮತ್ತೊಮ್ಮೆ ಮೋದಿ ಎಂದು ಇಡಿ ದೇಶವೇ ಅನುಸರಿಸುತ್ತಿದೆ. ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ 28 ಕ್ಷೇತ್ರ ಗೆಲ್ಲುತ್ತೇವೆ. ನೆರೆಯ ರಾಜ್ಯವಾದ ತಮಿಳುನಾಡಲ್ಲೂ ಕೂಡ ಬಿಜೆಪಿ ಹಾಗೂ ಎನ್ ಡಿಎ ಅಲೆಯನ್ಸ್ ಗೆಲ್ಲುತ್ತದೆ ಎಂದು ಮಾಜಿ ಸಚಿವ ಸಿಟಿ ರವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿಂದು (ಏ.೮) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ಕಮ್ಯುನಲ್‌ ಪಕ್ಷವಾಗಿದ್ದು, ಕರೆಪ್ಷನ್‌ನ ಇನ್ನೊಂದು ಮುಖವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ತೆರಿಗೆ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು ನೀಡಿದವರು ಪ್ರಧಾನಿ ಮೋದಿ ಅವರು, ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಕೊಟ್ಟ ಕೊಡುಗೆ ಬಗ್ಗೆ ಹೇಳಿ ಎಂದು ಪ್ರಶ್ನೆ ಮಾಡಿದರು.

ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಕೊಟ್ಟ ಕೊಡುಗೆಗಳ ಬಗ್ಗೆ ವಿವರಿಸಿ, ಅದು ಬಿಟ್ಟು ಸುಕಾಸುಮ್ಮನೆ ಆರೋಪ ಮಾಡುವುದಲ್ಲ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಕೊಟ್ಟ ಕೊಡುಗೆ ಬಗ್ಗೆ ಹೇಳಿ. ರಾಜ್ಯಕ್ಕೆ ಅತಿ ಹೆಚ್ಚು ತೆರಿಗೆ ಪಾಲು ನೀಡಿದವರು ಪ್ರಧಾನಿ ಮೋದಿ ಅವರಾಗಿದ್ದಾರೆ. ಈ ಬಗ್ಗೆ ನಿಮಗೆ ಕಣ್ಣು ಕಾಣದೇ ಹೋದರೇ ನಿಮ್ಮ ದೃಷ್ಟಿಯಾದರೆ ದೃಷ್ಟಿದೋಷ ನಿವಾರಣೆ ಮಾಡಬೇಕು ಎಂದು ಸಿ.ಟಿ ರವಿ ಲೇವಡಿ ಮಾಡಿದರು.

ಮನಮೋಹನ್ ಸಿಂಗ್ ಇದ್ದಾಗ ಕೊಟ್ಟ ಅನುದಾನ, ಮೋದಿಯವರು ಕೊಟ್ಟ ಅನುದಾನದ ಬಗ್ಗೆ ಚರ್ಚೆ ನಡೆಸಲು ನಾವು ಸಿದ್ದ. ನೀವು ನೀತಿ ಬಗ್ಗೆ ಅಲ್ಲ ಜಾತಿ ಬಗ್ಗೆ ಚರ್ಚೆ ನಡೆಸಲಿಕ್ಕೆ ಮುಂದಾಗಿದ್ದಿರಿ. ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆಯನ್ನ ಯಾವ ಮಾನದಲ್ಲಿ ಅಳೆಯಿತ್ತೀರಿ. ದೇವರಾಜ ಅರಸು ಸಾಮಾಜಿಕ ನ್ಯಾಯವನ್ನ ಅಪಮಾನಿಸುವ ರೀತಿ ಮಾತನಾಡುತ್ತೀರಾ. ಅಧಿಕಾರಕ್ಕಾಗಿ ಬಳಸಿಕೊಂಡ ಅಹಿಂದ ಎಲ್ಲಿ ಹೋಯ್ತು ಸಿದ್ದರಾಮಯ್ಯರೇ..? ಎಂದು ಹರಿಹಾಯ್ದರು.

ಮೈಸೂರು ಕೊಡಗು ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಸಿಎಂ ವಿರುದ್ದ ವಾಗ್ದಾಳಿ ನಡೆಸಿ, ಸಿದ್ದರಾಮಯ್ಯ ಅವರು ಚುನಾವಣೆಗೂ ಮುಂಚೆ ಸೋಲು ಒಪ್ಪಿಕೊಂಡಿದ್ದಾರೆ. ಒಕ್ಕಲಿಗರು ನೀತಿ ಹಿಂದೆ ಹೋದವರು, ನೀತಿ ಬೆಂಬಲಿಸಿದವರು. ಯಾರನ್ನೋ ಕರೆದುಕೊಂಡು ಬಂದು ಒಕ್ಕಲಿಗೆ ಎಂದರೆ ಸಂಸ್ಕಾರ ಇಲ್ಲದೇ ಇರುವವರನ್ನು ಕರೆತಂದು ಒಕ್ಕಲಿಗ ಅಂದ್ರೆ ಸಮುದಾಯ ಒಪ್ಪಲ್ಲ. ಕಾರ್ಪೋರೇಷನ್ ಸೋತವರು, ವಿಧಾನಪರಿಷತ್ ನಲ್ಲಿ ಸೋತವರನ್ನ ಪಾರ್ಲಿಮೆಂಟ್ ಗೆ ನಿಲ್ಲಿಸುವ ದುಸ್ಥಿತಿ ಬಂದಿದೆ. ಲೂಸ್ ಟಾಕ್ ಲಕ್ಷ್ಮಣ್. ಇದು ಕಾಂಗ್ರೆಸ್‌ ನವರೇ ಕೊಟ್ಟಿರುವ ಬಿರುದು ಎಂದು ಕಿಡಿಕಾರಿದರು.

ಸಂಸದ ಪ್ರತಾಪ್ ಸಿಂಹ, ಶಾಸಕ ಶ್ರೀವತ್ಸ, ಬಿಜೆಪಿ ಮುಖಂಡರಾದ ಸಂದೇಶ್ ಸ್ವಾಮಿ, ಮೋಹನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

4 mins ago

ಅಕ್ಕಿ ಬೆಲೆ ಹೆಚ್ಚಳ: ಗ್ರಾಹಕರ ಜೇಬಿಗೆ ಹೊರೆ

ಚನ್ನೇಶ ಬಿ.ಇದರಮನಿ ಬರ ಪರಿಸ್ಥಿತಿಯಿಂದ ಅಕ್ಕಿ ಬೆಲೆ ಇನ್ನಷ್ಟು ಏರಿಕೆ ಸಾಧ್ಯತೆ ಪ್ರತಿ ಕೆಜಿಗೆ ೬ ರಿಂದ ೧೦ ರೂ.ಗಳಷ್ಟು…

8 mins ago

ಧ್ರುವರ ಹೆಸರಿಗೆ ಹೊಳಪು ನೀಡುವ ಅಭಿಮಾನಿ ಬಳಗ

ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ  ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ…

13 mins ago

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

24 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

24 hours ago