ಮೈಸೂರು : ಸಾಂಸ್ಕೃತಿಕ ನಗರಕ್ಕೆ ಕೊಡುಗೆ ನೀಡಿದ ಕುಟುಂಬಕ್ಕೆ ಕೊಡುಗೆ ನೀಡಬೇಕು ಎಂಬ ಉದ್ದೇಶದಿಂದ ಯದುವೀರ್ ಅವರನ್ನುಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್ ಮಾಜಿ ಶಾಸಕ ಸಾರಾ ಮಹೇಶ್ ಅಭಿಪ್ರಾಯಪಟ್ಟರು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ದ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾ ಒಡೆಯರ್ ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿದ ಅವರು, ಮೈಸೂರು ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ರಾಜಮನೆತನದ ಕೊಡುಗೆ ಅಪಾರವಾದ್ದು. ಯದುವೀರ್ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಆ ಕುಟುಂಬಕ್ಕೆ ಕೊಡುಗೆ ನೀಡುವ ಉದ್ದೇಶವನ್ನು ಎರಡೂ ಪಕ್ಷದ ಹಿರಿಯ ನಾಯಕರು ಹೊಂದಿದ್ದಾರೆ ಎಂದರು.
ಚುನಾವಣೆಯಲ್ಲಿ ಈಗಾಗಲೆ ಯದುವೀರ್ ಅವರು ಜಯಗಳಿಸಿದ್ದಾರೆ. ಅಧಿಕೃತವಾಗಿ ಘೋಷಣೆಯಾಗಬೇಕಿದೆ ಅಷ್ಟೆ ಎಂದು ಅಭಿಪ್ರಾಯ ತಿಳಿಸಿದರು.
ರಾಷ್ಟ್ರ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ನನ್ನ ನಾಯಕರಾದ ಕುಮಾರಸ್ವಾಮಿ ಅವರ ಕೈ ಬಲ ಪಡಿಸಲು ನಿಮ್ಮ ಜೊತೆ ಹೆಗಲಿಗೆ ಹೆಗಲು ಕೊಟ್ಟು, ಹಗಲು ರಾತ್ರಿ ಕೆಲಸ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…