ಮೈಸೂರು : ಸಾಂಸ್ಕೃತಿಕ ನಗರಕ್ಕೆ ಕೊಡುಗೆ ನೀಡಿದ ಕುಟುಂಬಕ್ಕೆ ಕೊಡುಗೆ ನೀಡಬೇಕು ಎಂಬ ಉದ್ದೇಶದಿಂದ ಯದುವೀರ್ ಅವರನ್ನುಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್ ಮಾಜಿ ಶಾಸಕ ಸಾರಾ ಮಹೇಶ್ ಅಭಿಪ್ರಾಯಪಟ್ಟರು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ದ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾ ಒಡೆಯರ್ ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿದ ಅವರು, ಮೈಸೂರು ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ರಾಜಮನೆತನದ ಕೊಡುಗೆ ಅಪಾರವಾದ್ದು. ಯದುವೀರ್ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಆ ಕುಟುಂಬಕ್ಕೆ ಕೊಡುಗೆ ನೀಡುವ ಉದ್ದೇಶವನ್ನು ಎರಡೂ ಪಕ್ಷದ ಹಿರಿಯ ನಾಯಕರು ಹೊಂದಿದ್ದಾರೆ ಎಂದರು.
ಚುನಾವಣೆಯಲ್ಲಿ ಈಗಾಗಲೆ ಯದುವೀರ್ ಅವರು ಜಯಗಳಿಸಿದ್ದಾರೆ. ಅಧಿಕೃತವಾಗಿ ಘೋಷಣೆಯಾಗಬೇಕಿದೆ ಅಷ್ಟೆ ಎಂದು ಅಭಿಪ್ರಾಯ ತಿಳಿಸಿದರು.
ರಾಷ್ಟ್ರ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ನನ್ನ ನಾಯಕರಾದ ಕುಮಾರಸ್ವಾಮಿ ಅವರ ಕೈ ಬಲ ಪಡಿಸಲು ನಿಮ್ಮ ಜೊತೆ ಹೆಗಲಿಗೆ ಹೆಗಲು ಕೊಟ್ಟು, ಹಗಲು ರಾತ್ರಿ ಕೆಲಸ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…