ಮೈಸೂರು : ಸಾಂಸ್ಕೃತಿಕ ನಗರಕ್ಕೆ ಕೊಡುಗೆ ನೀಡಿದ ಕುಟುಂಬಕ್ಕೆ ಕೊಡುಗೆ ನೀಡಬೇಕು ಎಂಬ ಉದ್ದೇಶದಿಂದ ಯದುವೀರ್ ಅವರನ್ನುಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್ ಮಾಜಿ ಶಾಸಕ ಸಾರಾ ಮಹೇಶ್ ಅಭಿಪ್ರಾಯಪಟ್ಟರು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ದ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾ ಒಡೆಯರ್ ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿದ ಅವರು, ಮೈಸೂರು ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ರಾಜಮನೆತನದ ಕೊಡುಗೆ ಅಪಾರವಾದ್ದು. ಯದುವೀರ್ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಆ ಕುಟುಂಬಕ್ಕೆ ಕೊಡುಗೆ ನೀಡುವ ಉದ್ದೇಶವನ್ನು ಎರಡೂ ಪಕ್ಷದ ಹಿರಿಯ ನಾಯಕರು ಹೊಂದಿದ್ದಾರೆ ಎಂದರು.
ಚುನಾವಣೆಯಲ್ಲಿ ಈಗಾಗಲೆ ಯದುವೀರ್ ಅವರು ಜಯಗಳಿಸಿದ್ದಾರೆ. ಅಧಿಕೃತವಾಗಿ ಘೋಷಣೆಯಾಗಬೇಕಿದೆ ಅಷ್ಟೆ ಎಂದು ಅಭಿಪ್ರಾಯ ತಿಳಿಸಿದರು.
ರಾಷ್ಟ್ರ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ನನ್ನ ನಾಯಕರಾದ ಕುಮಾರಸ್ವಾಮಿ ಅವರ ಕೈ ಬಲ ಪಡಿಸಲು ನಿಮ್ಮ ಜೊತೆ ಹೆಗಲಿಗೆ ಹೆಗಲು ಕೊಟ್ಟು, ಹಗಲು ರಾತ್ರಿ ಕೆಲಸ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…