ಮೈಸೂರು

ನಂಜನಗೂಡಿನಲ್ಲಿ ಕೆಂಪೇಗೌಡರ ರಥಯಾತ್ರೆಗೆ ಬಿ.ಹರ್ಷವರ್ಧನ್ ಸ್ವಾಗತ

ನಂಜನಗೂಡು: ಬೆಂಗಳೂರಿನಲ್ಲಿ ನ.11ರಂದು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಪ್ರಧಾನಿಗಳು ಅನಾವರಣಗೊಳಿಸಲಿದ್ದು, ಅದರ ಜೊತೆಗೆ ಕೆಂಪೇಗೌಡರ ಮಾಹಿತಿ, ಇತಿಹಾಸ ಸಾರುವ ಮ್ಯೂಸಿಯಂ ಕೂಡ ಸ್ಥಾಪನೆಯಾಗಲಿದೆ ಎಂದು ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು.

ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಆಗಮಿಸಿದ ನಾಡಪ್ರಭು ಕೆಂಪೇಗೌಡರ ರಥ ಯಾತ್ರೆಯನ್ನು ಸ್ವಾಗತಿಸಿ ಬೀಳ್ಕೊಡುಗೆ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ನಿರ್ಮಾತೃ ಕೆಂಪೇಗೌಡರು ದೂರದೃಷ್ಟಿಯಿಂದ ಅವರು ಬೆಂಗಳೂರು ಪೇಟೆಗಳನ್ನು ಕಟ್ಟಿ, ಕೆರೆ ಕಟ್ಟೆಗಳನ್ನು ಅಭಿವೃದ್ಧಿಪಡಿಸಿ ನಾಡಪ್ರಭುಗಳಾಗಿ ಆಡಳಿತ ನಡೆಸಿದವರು. ಅವರ ಅಮೂಲ್ಯ ಸೇವೆ ಇಂದು ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ.

 ಇಂತಹವರ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11 ರಂದು ಉದ್ಘಾಟಿಸಲಿದ್ದಾರೆ.
ಪ್ರತಿ ಗ್ರಾಮಗಳಿಂದಲೂ ಸ್ವಲ್ಪ ಪ್ರಮಾಣದ ಮಣ್ಣನ್ನು ತೆಗೆದುಕೊಂಡು ಹೋಗಲಾಗುತ್ತಿದೆ. ಕೆಂಪೇಗೌಡರ ಮ್ಯೂಸಿಯಂ ಆವರಣದಲ್ಲಿ ಉದ್ಯಾನವನ ನಿರ್ಮಾಣವಾಗಲಿದೆ. ಗುಜರಾತಿನಲ್ಲಿ ಸರ್ದಾರ್ ವಲ್ಲಭಬಾಯಿಪಟೇಲ್ ಪ್ರತಿಮೆಯ ರೀತಿಯಲ್ಲಿ ಅಭಿವೃದ್ಧಿಯಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಕಾಂಪೋಸ್ಟ್ ನಿಗಮದ ಅಧ್ಯಕ್ಷ ಎಸ್.ಮಹದೇವಯ್ಯ, ಮಾಜಿ ಖಾದಿ ಮತ್ತು ಗ್ರಾಮೋದ್ಯೋಗ ಅದ್ಯಕ್ಷ ಎನ್.ಆರ್.ಕೃಷ್ಣಪ್ಪಗೌಡ, ನಗರಸಭಾಧ್ಯಕ್ಷ ಎಚ್.ಎಸ್.ಮಹದೇವಸ್ವಾಮಿ, ಮಾಜಿ ಪುರಸಭಾದ್ಯಕ್ಷ ಎಂ.ಶ್ರೀಧರ್, ವಿಚಾರ ವೇದಿಕೆಯ ಅಧ್ಯಕ್ಷ ಎಸ್.ಜಗದೀಶ, ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಎನ್.ನರಸಿಂಹಸ್ವಾಮಿ, ಮುಖಂಡ ಆನಂದ್, ನಗರಸಭಾ ಸದಸ್ಯರುಗಳಾದ ಮಹದೇವಮ್ಮ, ವಿಜಯಲಕ್ಷ್ಮಿ, ಶ್ವೇತಲಕ್ಷ್ಮಿ, ಸೌದೆ ಡಿಪೋ ನಾಗು, ರಂಗಸ್ವಾಮಿ, ತಹಶೀಲ್ದಾರ್ ಶಿವಮೂರ್ತಿ, ಶ್ರೀನಿವಾಸ್ ಸೇರಿದಂತೆ ಹಲವಾರು ಪ್ರಮುಖರು ಭಾಗವಹಿಸಿದ್ದರು.

 

andolana

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

10 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

11 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

11 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

11 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

11 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

11 hours ago