ಮೈಸೂರು

ನಂಜನಗೂಡಿನಲ್ಲಿ ಕೆಂಪೇಗೌಡರ ರಥಯಾತ್ರೆಗೆ ಬಿ.ಹರ್ಷವರ್ಧನ್ ಸ್ವಾಗತ

ನಂಜನಗೂಡು: ಬೆಂಗಳೂರಿನಲ್ಲಿ ನ.11ರಂದು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಪ್ರಧಾನಿಗಳು ಅನಾವರಣಗೊಳಿಸಲಿದ್ದು, ಅದರ ಜೊತೆಗೆ ಕೆಂಪೇಗೌಡರ ಮಾಹಿತಿ, ಇತಿಹಾಸ ಸಾರುವ ಮ್ಯೂಸಿಯಂ ಕೂಡ ಸ್ಥಾಪನೆಯಾಗಲಿದೆ ಎಂದು ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು.

ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಆಗಮಿಸಿದ ನಾಡಪ್ರಭು ಕೆಂಪೇಗೌಡರ ರಥ ಯಾತ್ರೆಯನ್ನು ಸ್ವಾಗತಿಸಿ ಬೀಳ್ಕೊಡುಗೆ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ನಿರ್ಮಾತೃ ಕೆಂಪೇಗೌಡರು ದೂರದೃಷ್ಟಿಯಿಂದ ಅವರು ಬೆಂಗಳೂರು ಪೇಟೆಗಳನ್ನು ಕಟ್ಟಿ, ಕೆರೆ ಕಟ್ಟೆಗಳನ್ನು ಅಭಿವೃದ್ಧಿಪಡಿಸಿ ನಾಡಪ್ರಭುಗಳಾಗಿ ಆಡಳಿತ ನಡೆಸಿದವರು. ಅವರ ಅಮೂಲ್ಯ ಸೇವೆ ಇಂದು ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ.

 ಇಂತಹವರ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11 ರಂದು ಉದ್ಘಾಟಿಸಲಿದ್ದಾರೆ.
ಪ್ರತಿ ಗ್ರಾಮಗಳಿಂದಲೂ ಸ್ವಲ್ಪ ಪ್ರಮಾಣದ ಮಣ್ಣನ್ನು ತೆಗೆದುಕೊಂಡು ಹೋಗಲಾಗುತ್ತಿದೆ. ಕೆಂಪೇಗೌಡರ ಮ್ಯೂಸಿಯಂ ಆವರಣದಲ್ಲಿ ಉದ್ಯಾನವನ ನಿರ್ಮಾಣವಾಗಲಿದೆ. ಗುಜರಾತಿನಲ್ಲಿ ಸರ್ದಾರ್ ವಲ್ಲಭಬಾಯಿಪಟೇಲ್ ಪ್ರತಿಮೆಯ ರೀತಿಯಲ್ಲಿ ಅಭಿವೃದ್ಧಿಯಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಕಾಂಪೋಸ್ಟ್ ನಿಗಮದ ಅಧ್ಯಕ್ಷ ಎಸ್.ಮಹದೇವಯ್ಯ, ಮಾಜಿ ಖಾದಿ ಮತ್ತು ಗ್ರಾಮೋದ್ಯೋಗ ಅದ್ಯಕ್ಷ ಎನ್.ಆರ್.ಕೃಷ್ಣಪ್ಪಗೌಡ, ನಗರಸಭಾಧ್ಯಕ್ಷ ಎಚ್.ಎಸ್.ಮಹದೇವಸ್ವಾಮಿ, ಮಾಜಿ ಪುರಸಭಾದ್ಯಕ್ಷ ಎಂ.ಶ್ರೀಧರ್, ವಿಚಾರ ವೇದಿಕೆಯ ಅಧ್ಯಕ್ಷ ಎಸ್.ಜಗದೀಶ, ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಎನ್.ನರಸಿಂಹಸ್ವಾಮಿ, ಮುಖಂಡ ಆನಂದ್, ನಗರಸಭಾ ಸದಸ್ಯರುಗಳಾದ ಮಹದೇವಮ್ಮ, ವಿಜಯಲಕ್ಷ್ಮಿ, ಶ್ವೇತಲಕ್ಷ್ಮಿ, ಸೌದೆ ಡಿಪೋ ನಾಗು, ರಂಗಸ್ವಾಮಿ, ತಹಶೀಲ್ದಾರ್ ಶಿವಮೂರ್ತಿ, ಶ್ರೀನಿವಾಸ್ ಸೇರಿದಂತೆ ಹಲವಾರು ಪ್ರಮುಖರು ಭಾಗವಹಿಸಿದ್ದರು.

 

andolana

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

5 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

11 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

11 hours ago