ಮೈಸೂರು

ನವೆಂಬರ್‌ ಕ್ರಾಂತಿ ಬಗ್ಗೆ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದೇನು?

ಮೈಸೂರು : ನವೆಂಬರ್ ನಲ್ಲಿ ಯಾವ ಕ್ರಾಂತಿಯೂ ಆಗಲ್ಲ ವಾಂತಿಯೂ ಆಗಲ್ಲ. ನನಗೆ ಸಿದ್ದರಾಮಯ್ಯನವರ ಗುಣ ಗೊತ್ತಿದೆ. ಅವರು ನಮ್ಮ ಪಕ್ಷದಲ್ಲೇ ಇದ್ದಾಗಲೇ ಅವರ ಗುಣ ತಿಳಿದುಕೊಂಡಿದ್ದೇನೆ. ಹೀಗಾಗಿ ಯಾವ ಬದಲಾವಣೆಯೂ ಅಗುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಹಾಗೂ ನವೆಂಬರ್ ಕ್ರಾಂತಿ ಬಗ್ಗೆ ಕೇಂದ್ರ ಸಚಿವರ ಗಮನ ಸೆಳೆದಾಗ ಪ್ರತಿಕ್ರಿಯಿಸಿ,ಡಿ.ಕೆ ಶಿವಕುಮಾರ್ ಯಾವಾಗಲೂ ದೇವರ ಜೊತೆ ಮಾತನಾಡುತ್ತಾರೆ. ದೇವರು ಅವರಿಗೆ ಏನೇನು ಹೇಳಿದ್ದಾನೋ ನಮಗೇನು ಗೊತ್ತು? ಅದೇನಿದ್ದರೂ ಡಿ.ಕೆ. ಶಿವಕುಮಾರ್ ಹಾಗೂ ದೇವರಿಗೆ ಸಂಬಂಧಪಟ್ಟ ವಿಚಾರ. ಹಾಗಂತ ಡಿಕೆಶಿ ಅವವ್ರೇ ಹೇಳಿದ್ದಾರೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

೨೦೨೮ಕ್ಕೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಡಿ.ಕೆ. ಶಿವಕುಮಾರ್ ಹೇಳಿಕೆ ವಿಚಾರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು, ೨೦, ೧೦ ವರ್ಷ ನಾವೇ ಎಂದು ಹೇಳಿದವರು ಏನಾಗಿದ್ದಾರೆ ಎಂಬುದು ನನಗೆ ಗೊತ್ತಿದೆ. ೨೦೨೮ಕ್ಕೆ ಏನೇನಾಗುತ್ತೊ ಯಾರಿಗೆ ಗೊತ್ತು ಬಿಡಿ ಎಂದು ಲೇವಡಿ ಮಾಡಿದರು.

ಇದನ್ನೂ ಓದಿ:-ಕೆಆರ್‌ಎಸ್ ಹಿನ್ನೀರಿನಲ್ಲಿ ಭೂ ಒತ್ತುವರಿ : ತೆರವಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ

ಸಿಎಂ ಸಿದ್ದರಾಮಯ್ಯ ಅವರು ಮೈಸೂರು ನಗರವನ್ನು ಗ್ರೇಟರ್ ಮೈಸೂರು ಮಾಡುತ್ತಾರೆ ಎಂದು ಹೇಳಿದ್ದಾರೆ ಎಂಬ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ಇದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವಿನ ಪೈಪೋಟಿ. ಡಿಕೆಶಿ ಮೇಲಿನ ಪೈಪೋಟಿಗಾಗಿ ಸಿದ್ದರಾಮಯ್ಯ ಅವರು ಗ್ರೇಟರ್ ಮೈಸೂರು ಘೋಷಣೆ ಮಾಡಿದ್ದಾರೆ. ಅಲ್ಲಿ ಡಿ.ಕೆ. ಶಿವಕುಮಾರ್ ಗ್ರೇಟರ್ ಬೆಂಗಳೂರು ಘೋಷಣೆ ಮಾಡಿದ್ದಾರೆ. ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ಗ್ರೇಟರ್ ಮೈಸೂರು ಎನ್ನುತ್ತಿದ್ದಾರೆ. ಯಾವ ಗ್ರೇಟರ್ ಕೂಡಾ ಆಗುವುದಿಲ್ಲ. ಇವರು ಸುಮ್ಮನೆ ಕಾಲಾಹರಣ ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

11 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

11 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

11 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

11 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

11 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

12 hours ago