ಮೈಸೂರು : ನವೆಂಬರ್ ನಲ್ಲಿ ಯಾವ ಕ್ರಾಂತಿಯೂ ಆಗಲ್ಲ ವಾಂತಿಯೂ ಆಗಲ್ಲ. ನನಗೆ ಸಿದ್ದರಾಮಯ್ಯನವರ ಗುಣ ಗೊತ್ತಿದೆ. ಅವರು ನಮ್ಮ ಪಕ್ಷದಲ್ಲೇ ಇದ್ದಾಗಲೇ ಅವರ ಗುಣ ತಿಳಿದುಕೊಂಡಿದ್ದೇನೆ. ಹೀಗಾಗಿ ಯಾವ ಬದಲಾವಣೆಯೂ ಅಗುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಹಾಗೂ ನವೆಂಬರ್ ಕ್ರಾಂತಿ ಬಗ್ಗೆ ಕೇಂದ್ರ ಸಚಿವರ ಗಮನ ಸೆಳೆದಾಗ ಪ್ರತಿಕ್ರಿಯಿಸಿ,ಡಿ.ಕೆ ಶಿವಕುಮಾರ್ ಯಾವಾಗಲೂ ದೇವರ ಜೊತೆ ಮಾತನಾಡುತ್ತಾರೆ. ದೇವರು ಅವರಿಗೆ ಏನೇನು ಹೇಳಿದ್ದಾನೋ ನಮಗೇನು ಗೊತ್ತು? ಅದೇನಿದ್ದರೂ ಡಿ.ಕೆ. ಶಿವಕುಮಾರ್ ಹಾಗೂ ದೇವರಿಗೆ ಸಂಬಂಧಪಟ್ಟ ವಿಚಾರ. ಹಾಗಂತ ಡಿಕೆಶಿ ಅವವ್ರೇ ಹೇಳಿದ್ದಾರೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
೨೦೨೮ಕ್ಕೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಡಿ.ಕೆ. ಶಿವಕುಮಾರ್ ಹೇಳಿಕೆ ವಿಚಾರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು, ೨೦, ೧೦ ವರ್ಷ ನಾವೇ ಎಂದು ಹೇಳಿದವರು ಏನಾಗಿದ್ದಾರೆ ಎಂಬುದು ನನಗೆ ಗೊತ್ತಿದೆ. ೨೦೨೮ಕ್ಕೆ ಏನೇನಾಗುತ್ತೊ ಯಾರಿಗೆ ಗೊತ್ತು ಬಿಡಿ ಎಂದು ಲೇವಡಿ ಮಾಡಿದರು.
ಇದನ್ನೂ ಓದಿ:-ಕೆಆರ್ಎಸ್ ಹಿನ್ನೀರಿನಲ್ಲಿ ಭೂ ಒತ್ತುವರಿ : ತೆರವಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ
ಸಿಎಂ ಸಿದ್ದರಾಮಯ್ಯ ಅವರು ಮೈಸೂರು ನಗರವನ್ನು ಗ್ರೇಟರ್ ಮೈಸೂರು ಮಾಡುತ್ತಾರೆ ಎಂದು ಹೇಳಿದ್ದಾರೆ ಎಂಬ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ಇದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವಿನ ಪೈಪೋಟಿ. ಡಿಕೆಶಿ ಮೇಲಿನ ಪೈಪೋಟಿಗಾಗಿ ಸಿದ್ದರಾಮಯ್ಯ ಅವರು ಗ್ರೇಟರ್ ಮೈಸೂರು ಘೋಷಣೆ ಮಾಡಿದ್ದಾರೆ. ಅಲ್ಲಿ ಡಿ.ಕೆ. ಶಿವಕುಮಾರ್ ಗ್ರೇಟರ್ ಬೆಂಗಳೂರು ಘೋಷಣೆ ಮಾಡಿದ್ದಾರೆ. ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ಗ್ರೇಟರ್ ಮೈಸೂರು ಎನ್ನುತ್ತಿದ್ದಾರೆ. ಯಾವ ಗ್ರೇಟರ್ ಕೂಡಾ ಆಗುವುದಿಲ್ಲ. ಇವರು ಸುಮ್ಮನೆ ಕಾಲಾಹರಣ ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…