ಮೈಸೂರು : ಮಹಿಷಾ ದಸರಾ ಹೆಸರಿನಲ್ಲಿ ತಾಯಿ ಚಾಮುಂಡೇಶ್ವರಿಗೆ ಅವಾಚ್ಯ ಶಬ್ದಗಳಿಂದ ಅಪಮಾನ ಮಾಡುತ್ತಾರೆ. ಈ ಕಾರಣಕ್ಕೆ ನಾನು ಮಹಿಷಾ ದಸರಾ ವಿರೋಧ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಫೇಸ್ ಬುಕ್ ಲೈವ್ನಲ್ಲಿ ಮಹಿಷಾ ದಸರಾ ಆಚರಣೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸಂಸದ ಪ್ರತಾಪ್ ಸಿಂಹ, ಬೆಟ್ಟಕ್ಕೆ ಬಂದು ಮಹಿಷಾ ಒಳ್ಳೆಯವನು ಅಂದಷ್ಟೇ ಹೇಳಿ ಹೋಗುವುದಿಲ್ಲ. ಚಾಮುಂಡಿಗೆ ರವಿಕೆ ಹಾಕೋನು ಗಂಡಸು, ಸೀರೆ ಉಡಿಸೋನು ಗಂಡಸು ಅಂತ ಕೆಟ್ಟದಾಗಿ ಮಾತನಾಡುತ್ತಾರೆ. ನಿಮ್ಮ ತಾಯಿ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಯಾರಾದರೂ ಒಪ್ಪಿಕೊಳ್ಳುತ್ತೀರಾ? ಮಹಿಷಾನನ್ನು ಒಳ್ಳೆಯವನನ್ನಾಗಿ ಮಾಡಲು ಚಾಮುಂಡೇಶ್ವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಇಂತಹವರನ್ನು ತಡೆಯಲು ನಾನು ವಿರೋಧ ಮಾಡುತ್ತಿದ್ದೇನೆ ಎಂದರು.
ಚಾಮುಂಡೇಶ್ವರಿಗೆ ಹೋಗಿ ಬೇಡಿಕೊಳ್ಳುವ ಪ್ರತಿಯೊಬ್ಬರು ಮಹಿಷಾ ದಸರಾಕ್ಕೆ ವಿರೋಧ ಮಾಡಬೇಕು. ಇಲ್ಲದಿದ್ದರೆ ತಾಯಿ ಚಾಮುಂಡಿ ಮುಂದೆ ಬೇಡಿಕೊಳ್ಳಲು ನಿಮಗೆ ಯಾವ ನೈತಿಕ ಹಕ್ಕು ಇರುವುದಿಲ್ಲ. ನನ್ನ ದಲಿತ ವಿರೋಧಿ ಅಂತ ಹೇಳುತ್ತಾರೆ. ವಿಚಾರ ಇಲ್ಲದಾಗ ಈ ರೀತಿ ಉಗುಳುತ್ತಾರೆ. ಮಹಿಷಾನ ಬಗ್ಗೆ ಯಾವುದೇ ದಾಖಲೆ ಇಲ್ಲ. ಈಗ ದಲಿತ ಅಂತ ಬೋರ್ಡ್ ಹಾಕಿಕೊಂಡು ಓಡಾಡುತ್ತಿರೋರು ಯಾರು ಅಂತಾನು ಮೈಸೂರಿಗರಿಗೆ ಗೊತ್ತು ಎಂದು ಗುಡುಗಿದರು.
ಅಶೋಕ್ ಪುರಂನ ಪ್ರತಿಯೊಬ್ಬರ ಮನೆಯಲ್ಲಿರೋದು ಚಾಮುಂಡೇಶ್ವರಿ ಪೋಟೋ. ಮಹಿಷಾನ ಪೋಟೋ ಅಲ್ಲ. ದಲಿತರೆ ಚಾಮುಂಡಿ ಹಬ್ಬವನ್ನು ಜಾಸ್ತಿ ಮಾಡೋದು. ಈಗ ರಾಜಕೀಯಕ್ಕೆ ದಲಿತ ವಿರೋಧಿ ಅನ್ನುತ್ತಾರೆ. ಮಹಿಷಾ ಯಾವಾಗ ದಲಿತನಾದ? ಮಹಿಷಾ ಬೌದ್ಧ ಬಿಕ್ಕು ಆಗಿದ್ದ ಅಂತ ಹೇಳುತ್ತಾರೆ. ತಾಯಿ ಚಾಮುಂಡಿ ಉಲ್ಲೇಖ ಬರೋದು ಕೃತ ಯುಗದಲ್ಲಿ. ಬುದ್ಧ ಬಂದಿದ್ದು ಕಲಿಯುಗದಲ್ಲಿ. ಅಶೋಕ ಇದ್ದಿದ್ದು ಕ್ರಿ.ಪೂ. 3 ನೇ ಶತಮಾನದಲ್ಲಿ. ಇವರು ಹೇಳುವ ವಿಚಾರ ಸಮಯಕ್ಕೆ ತಾಳ ಮೇಳ ಇಲ್ಲ. ಇದೆಲ್ಲ ಕಪೋಲ ಕಲ್ಪಿತ ವಿಚಾರಗಳು ಎಂದರು.
ಹಿಂದೂ ಧರ್ಮ ಒಡೆಯುವ ಪ್ರಯತ್ನಕ್ಕೆ ಇದೆಲ್ಲ ಮಾಡುತ್ತಿದ್ದಾರೆ. ಕೆಲವರು ನನ್ನ ಬಗ್ಗೆ ವಿರೋಧ ಮಾಡುತ್ತಿದ್ದಾರೆ. ಇದೆಲ್ಲ ವೈಯಕ್ತಿಕ ಲಾಭ ನಷ್ಟದಿಂದ ಆಗಿರೋದು. ನಿಜವಾದ ದಲಿತ ವಿರೋಧಿಗಳು ನೀವುಗಳು. ಲಲಿತ ನಾಯಕರಿಂದ ಉದ್ಘಾಟನೆ ಮಾಡಿಸಲು ಮುಂದಾದ್ರಿ. ಆಕೆಯ ಪುತ್ರ ಅಂಬೇಡ್ಕರ್ ಪುತ್ಥಳಿಗೆ ಮದ್ಯ ಕುಡಿಸಿದ್ದ. ನೀವು ಅಂಬೇಡ್ಕರ್ ವಾದಿಗಳು ಅಂತೀರಾ. ಆದರೆ ಅಂಬೇಡ್ಕರ್ ಪುತ್ಥಳಿಗೆ ಹೆಂಡ ಕುಡಿಸಿದ ತಾಯಿಯಿಂದ ಉದ್ಘಾಟನೆ ಮಾಡಿಸುತ್ತಿದ್ದೀರಿ ಎಂದು ಕಿಡಿಕಾರಿದರು.
ಸುಮ್ಮನೆ ನನ್ನ ದಲಿತ ವಿರೋಧಿ ಅಂತ ಹೇಳೋದು ಬೇಡ. ಮೈಸೂರಿಗರ ಬಳಿ ಹೋರಾಟದ ಗುಣ ಇಲ್ಲ ಅಂತ ಅಂದುಕೊಳ್ಳಬೇಡಿ. ನಿಮ್ಮ ಮನೆಯಲ್ಲಿ ನಿಮ್ಮ ಹೆಂಡತಿ ಮಹಿಷಾ ಪೋಟೋ ಇಟ್ಟುಕೊಳ್ಳೊಕೆ ಬಿಡ್ತಾರ? ನಿಮ್ಮ ಮನೆಯಲ್ಲೇ ಬೇಕಾದರೆ ಮಹಿಷಾ ದಸರಾ ಮಾಡಿಕೊಳ್ಳಿ. ಬೆಟ್ಟಕ್ಕೆ ಹೋಗಿ ಚಾಮುಂಡಿಗೆ ಅಪಮಾನ ಮಾಡಬೇಕು ಅಂತ ನೀವು ಅಲ್ಲಿ ಹೋಗೋದು. ಕೆಲವರಿಗೆ ಅರ್ಥವಾಗಬೇಕು ಅಂತ ನಿಮ್ಮ ಭಾಷೆಯಲ್ಲಿ ಹೇಳಿರೋದು. ಇಂತಹವರನ್ನು ವಿರೋಧಿಸದಿದ್ದರೆ ಮುಂದೆ ಇಸ್ರೇಲ್ ಪರಿಸ್ಥಿತಿ ನಿರ್ಮಾಣ ವಾಗುತ್ತೆ ಎಂದು ಹೇಳಿದರು.
ಚೆಟ್ಟಳ್ಳಿ: ಯುದ್ಧ ಪರಿಸ್ಥಿತಿಯಿಂದಾಗಿ ದಂಪತಿ ಇರಾನ್ಗೆ ಮರಳಲಾಗದೆ ಕೊಡಗು ಜಿಲ್ಲೆಯ ಮೂರ್ನಾಡು ಸಮೀಪದ ಕಾಂತೂರಿನಲ್ಲಿ ಪರಿತಪಿಸುವಂತಾಗಿದೆ. ಕಾಂತೂರು ನಿವಾಸಿ ಪತ್ನಿ…
ದಾವಣಗೆರೆ: ಎಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ನವದೆಹಲಿ: ಈ ವಾರ ದೇಶದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ…
ಟೆಹರಾನ್: ಅಮೇರಿಕಾ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ನ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್ ಕಾಪ್ಸ್ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆಯಾಗಿದ್ದಾರೆ…
ಬಾಗಲಕೋಟೆ: ಬೂತ್ ಮಟ್ಟದಲ್ಲಿ ನಾವು ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು. ಜನರಿಗೆ ಸರಕಾರದ ಯೋಜನೆಗಳನ್ನು ತಲುಪಿಸಬೇಕು ಎಂದು ಮಾಜಿ…
ದೇವನಹಳ್ಳಿ: ಸಮಸಮಾಜದ ನಿರ್ಮಾಣಕ್ಕೆ ಕ್ರಾಂತಿಯನ್ನೇ ಮಾಡಿದ ಬಸವಣ್ಣನವರ ತತ್ವಾದರ್ಶಗಳು ಸಾರ್ವಕಾಲಿಕವಾಗಿದ್ದು, ಬಸವ ತತ್ವಗಳ ಪ್ರಚಾರ, ಪ್ರಸಾರ ಇಂದಿನ ಅಗತ್ಯವಾಗಿದೆ ಎಂದು…