ಮೈಸೂರು

ಮಹಿಷಾ ಯಾವಾಗ ದಲಿತನಾದ? : ಪ್ರತಾಪ್ ಸಿಂಹ ಪ್ರಶ್ನೆ

ಮೈಸೂರು : ಮಹಿಷಾ ದಸರಾ ಹೆಸರಿನಲ್ಲಿ ತಾಯಿ ಚಾಮುಂಡೇಶ್ವರಿಗೆ ಅವಾಚ್ಯ ಶಬ್ದಗಳಿಂದ ಅಪಮಾನ ಮಾಡುತ್ತಾರೆ. ಈ ಕಾರಣಕ್ಕೆ ನಾನು ಮಹಿಷಾ ದಸರಾ ವಿರೋಧ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಫೇಸ್ ಬುಕ್ ಲೈವ್‌ನಲ್ಲಿ ಮಹಿಷಾ ದಸರಾ ಆಚರಣೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸಂಸದ ಪ್ರತಾಪ್ ಸಿಂಹ, ಬೆಟ್ಟಕ್ಕೆ ಬಂದು ಮಹಿಷಾ ಒಳ್ಳೆಯವನು ಅಂದಷ್ಟೇ ಹೇಳಿ ಹೋಗುವುದಿಲ್ಲ. ಚಾಮುಂಡಿಗೆ ರವಿಕೆ ಹಾಕೋನು ಗಂಡಸು, ಸೀರೆ ಉಡಿಸೋನು ಗಂಡಸು ಅಂತ ಕೆಟ್ಟದಾಗಿ ಮಾತನಾಡುತ್ತಾರೆ. ನಿಮ್ಮ ತಾಯಿ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಯಾರಾದರೂ ಒಪ್ಪಿಕೊಳ್ಳುತ್ತೀರಾ? ಮಹಿಷಾನನ್ನು ಒಳ್ಳೆಯವನನ್ನಾಗಿ ಮಾಡಲು ಚಾಮುಂಡೇಶ್ವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಇಂತಹವರನ್ನು ತಡೆಯಲು ನಾನು ವಿರೋಧ ಮಾಡುತ್ತಿದ್ದೇನೆ ಎಂದರು.

ಚಾಮುಂಡೇಶ್ವರಿಗೆ ಹೋಗಿ ಬೇಡಿಕೊಳ್ಳುವ ಪ್ರತಿಯೊಬ್ಬರು ಮಹಿಷಾ ದಸರಾಕ್ಕೆ ವಿರೋಧ ಮಾಡಬೇಕು. ಇಲ್ಲದಿದ್ದರೆ ತಾಯಿ ಚಾಮುಂಡಿ ಮುಂದೆ ಬೇಡಿಕೊಳ್ಳಲು ನಿಮಗೆ ಯಾವ ನೈತಿಕ ಹಕ್ಕು ಇರುವುದಿಲ್ಲ. ನನ್ನ ದಲಿತ ವಿರೋಧಿ ಅಂತ ಹೇಳುತ್ತಾರೆ. ವಿಚಾರ ಇಲ್ಲದಾಗ ಈ ರೀತಿ ಉಗುಳುತ್ತಾರೆ. ಮಹಿಷಾನ ಬಗ್ಗೆ ಯಾವುದೇ ದಾಖಲೆ ಇಲ್ಲ. ಈಗ ದಲಿತ ಅಂತ ಬೋರ್ಡ್ ಹಾಕಿಕೊಂಡು ಓಡಾಡುತ್ತಿರೋರು ಯಾರು ಅಂತಾನು ಮೈಸೂರಿಗರಿಗೆ ಗೊತ್ತು ಎಂದು ಗುಡುಗಿದರು.

ಅಶೋಕ್ ಪುರಂನ ಪ್ರತಿಯೊಬ್ಬರ ಮನೆಯಲ್ಲಿರೋದು ಚಾಮುಂಡೇಶ್ವರಿ ಪೋಟೋ. ಮಹಿಷಾನ ಪೋಟೋ ಅಲ್ಲ. ದಲಿತರೆ ಚಾಮುಂಡಿ ಹಬ್ಬವನ್ನು ಜಾಸ್ತಿ ಮಾಡೋದು. ಈಗ ರಾಜಕೀಯಕ್ಕೆ ದಲಿತ ವಿರೋಧಿ ಅನ್ನುತ್ತಾರೆ. ಮಹಿಷಾ ಯಾವಾಗ ದಲಿತನಾದ? ಮಹಿಷಾ ಬೌದ್ಧ ಬಿಕ್ಕು ಆಗಿದ್ದ ಅಂತ ಹೇಳುತ್ತಾರೆ. ತಾಯಿ ಚಾಮುಂಡಿ ಉಲ್ಲೇಖ ಬರೋದು ಕೃತ ಯುಗದಲ್ಲಿ. ಬುದ್ಧ ಬಂದಿದ್ದು ಕಲಿಯುಗದಲ್ಲಿ. ಅಶೋಕ ಇದ್ದಿದ್ದು ಕ್ರಿ.ಪೂ. 3 ನೇ ಶತಮಾನದಲ್ಲಿ. ಇವರು ಹೇಳುವ ವಿಚಾರ ಸಮಯಕ್ಕೆ ತಾಳ ಮೇಳ ಇಲ್ಲ. ಇದೆಲ್ಲ ಕಪೋಲ ಕಲ್ಪಿತ ವಿಚಾರಗಳು ಎಂದರು.

ಹಿಂದೂ ಧರ್ಮ ಒಡೆಯುವ ಪ್ರಯತ್ನಕ್ಕೆ ಇದೆಲ್ಲ ಮಾಡುತ್ತಿದ್ದಾರೆ. ಕೆಲವರು ನನ್ನ ಬಗ್ಗೆ ವಿರೋಧ ಮಾಡುತ್ತಿದ್ದಾರೆ. ಇದೆಲ್ಲ ವೈಯಕ್ತಿಕ ಲಾಭ ನಷ್ಟದಿಂದ ಆಗಿರೋದು. ನಿಜವಾದ ದಲಿತ ವಿರೋಧಿಗಳು ನೀವುಗಳು. ಲಲಿತ ನಾಯಕರಿಂದ ಉದ್ಘಾಟನೆ ಮಾಡಿಸಲು ಮುಂದಾದ್ರಿ. ಆಕೆಯ ಪುತ್ರ ಅಂಬೇಡ್ಕರ್ ಪುತ್ಥಳಿಗೆ ಮದ್ಯ ಕುಡಿಸಿದ್ದ. ನೀವು ಅಂಬೇಡ್ಕರ್ ವಾದಿಗಳು ಅಂತೀರಾ. ಆದರೆ ಅಂಬೇಡ್ಕರ್ ಪುತ್ಥಳಿಗೆ ಹೆಂಡ ಕುಡಿಸಿದ ತಾಯಿಯಿಂದ ಉದ್ಘಾಟನೆ ಮಾಡಿಸುತ್ತಿದ್ದೀರಿ ಎಂದು ಕಿಡಿಕಾರಿದರು.

ಸುಮ್ಮನೆ ನನ್ನ ದಲಿತ ವಿರೋಧಿ ಅಂತ ಹೇಳೋದು ಬೇಡ. ಮೈಸೂರಿಗರ ಬಳಿ ಹೋರಾಟದ ಗುಣ ಇಲ್ಲ ಅಂತ ಅಂದುಕೊಳ್ಳಬೇಡಿ. ನಿಮ್ಮ ಮನೆಯಲ್ಲಿ ನಿಮ್ಮ ಹೆಂಡತಿ ಮಹಿಷಾ ಪೋಟೋ ಇಟ್ಟುಕೊಳ್ಳೊಕೆ ಬಿಡ್ತಾರ? ನಿಮ್ಮ ಮನೆಯಲ್ಲೇ ಬೇಕಾದರೆ ಮಹಿಷಾ ದಸರಾ ಮಾಡಿಕೊಳ್ಳಿ. ಬೆಟ್ಟಕ್ಕೆ ಹೋಗಿ ಚಾಮುಂಡಿಗೆ ಅಪಮಾನ ಮಾಡಬೇಕು ಅಂತ ನೀವು ಅಲ್ಲಿ ಹೋಗೋದು. ಕೆಲವರಿಗೆ ಅರ್ಥವಾಗಬೇಕು ಅಂತ ನಿಮ್ಮ ಭಾಷೆಯಲ್ಲಿ ಹೇಳಿರೋದು. ಇಂತಹವರನ್ನು ವಿರೋಧಿಸದಿದ್ದರೆ ಮುಂದೆ ಇಸ್ರೇಲ್ ಪರಿಸ್ಥಿತಿ ನಿರ್ಮಾಣ ವಾಗುತ್ತೆ ಎಂದು ಹೇಳಿದರು.

lokesh

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

22 mins ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

54 mins ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

2 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

2 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

3 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

4 hours ago