ಮೈಸೂರು

ಮಹಿಷಾ ಯಾವಾಗ ದಲಿತನಾದ? : ಪ್ರತಾಪ್ ಸಿಂಹ ಪ್ರಶ್ನೆ

ಮೈಸೂರು : ಮಹಿಷಾ ದಸರಾ ಹೆಸರಿನಲ್ಲಿ ತಾಯಿ ಚಾಮುಂಡೇಶ್ವರಿಗೆ ಅವಾಚ್ಯ ಶಬ್ದಗಳಿಂದ ಅಪಮಾನ ಮಾಡುತ್ತಾರೆ. ಈ ಕಾರಣಕ್ಕೆ ನಾನು ಮಹಿಷಾ ದಸರಾ ವಿರೋಧ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಫೇಸ್ ಬುಕ್ ಲೈವ್‌ನಲ್ಲಿ ಮಹಿಷಾ ದಸರಾ ಆಚರಣೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸಂಸದ ಪ್ರತಾಪ್ ಸಿಂಹ, ಬೆಟ್ಟಕ್ಕೆ ಬಂದು ಮಹಿಷಾ ಒಳ್ಳೆಯವನು ಅಂದಷ್ಟೇ ಹೇಳಿ ಹೋಗುವುದಿಲ್ಲ. ಚಾಮುಂಡಿಗೆ ರವಿಕೆ ಹಾಕೋನು ಗಂಡಸು, ಸೀರೆ ಉಡಿಸೋನು ಗಂಡಸು ಅಂತ ಕೆಟ್ಟದಾಗಿ ಮಾತನಾಡುತ್ತಾರೆ. ನಿಮ್ಮ ತಾಯಿ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಯಾರಾದರೂ ಒಪ್ಪಿಕೊಳ್ಳುತ್ತೀರಾ? ಮಹಿಷಾನನ್ನು ಒಳ್ಳೆಯವನನ್ನಾಗಿ ಮಾಡಲು ಚಾಮುಂಡೇಶ್ವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಇಂತಹವರನ್ನು ತಡೆಯಲು ನಾನು ವಿರೋಧ ಮಾಡುತ್ತಿದ್ದೇನೆ ಎಂದರು.

ಚಾಮುಂಡೇಶ್ವರಿಗೆ ಹೋಗಿ ಬೇಡಿಕೊಳ್ಳುವ ಪ್ರತಿಯೊಬ್ಬರು ಮಹಿಷಾ ದಸರಾಕ್ಕೆ ವಿರೋಧ ಮಾಡಬೇಕು. ಇಲ್ಲದಿದ್ದರೆ ತಾಯಿ ಚಾಮುಂಡಿ ಮುಂದೆ ಬೇಡಿಕೊಳ್ಳಲು ನಿಮಗೆ ಯಾವ ನೈತಿಕ ಹಕ್ಕು ಇರುವುದಿಲ್ಲ. ನನ್ನ ದಲಿತ ವಿರೋಧಿ ಅಂತ ಹೇಳುತ್ತಾರೆ. ವಿಚಾರ ಇಲ್ಲದಾಗ ಈ ರೀತಿ ಉಗುಳುತ್ತಾರೆ. ಮಹಿಷಾನ ಬಗ್ಗೆ ಯಾವುದೇ ದಾಖಲೆ ಇಲ್ಲ. ಈಗ ದಲಿತ ಅಂತ ಬೋರ್ಡ್ ಹಾಕಿಕೊಂಡು ಓಡಾಡುತ್ತಿರೋರು ಯಾರು ಅಂತಾನು ಮೈಸೂರಿಗರಿಗೆ ಗೊತ್ತು ಎಂದು ಗುಡುಗಿದರು.

ಅಶೋಕ್ ಪುರಂನ ಪ್ರತಿಯೊಬ್ಬರ ಮನೆಯಲ್ಲಿರೋದು ಚಾಮುಂಡೇಶ್ವರಿ ಪೋಟೋ. ಮಹಿಷಾನ ಪೋಟೋ ಅಲ್ಲ. ದಲಿತರೆ ಚಾಮುಂಡಿ ಹಬ್ಬವನ್ನು ಜಾಸ್ತಿ ಮಾಡೋದು. ಈಗ ರಾಜಕೀಯಕ್ಕೆ ದಲಿತ ವಿರೋಧಿ ಅನ್ನುತ್ತಾರೆ. ಮಹಿಷಾ ಯಾವಾಗ ದಲಿತನಾದ? ಮಹಿಷಾ ಬೌದ್ಧ ಬಿಕ್ಕು ಆಗಿದ್ದ ಅಂತ ಹೇಳುತ್ತಾರೆ. ತಾಯಿ ಚಾಮುಂಡಿ ಉಲ್ಲೇಖ ಬರೋದು ಕೃತ ಯುಗದಲ್ಲಿ. ಬುದ್ಧ ಬಂದಿದ್ದು ಕಲಿಯುಗದಲ್ಲಿ. ಅಶೋಕ ಇದ್ದಿದ್ದು ಕ್ರಿ.ಪೂ. 3 ನೇ ಶತಮಾನದಲ್ಲಿ. ಇವರು ಹೇಳುವ ವಿಚಾರ ಸಮಯಕ್ಕೆ ತಾಳ ಮೇಳ ಇಲ್ಲ. ಇದೆಲ್ಲ ಕಪೋಲ ಕಲ್ಪಿತ ವಿಚಾರಗಳು ಎಂದರು.

ಹಿಂದೂ ಧರ್ಮ ಒಡೆಯುವ ಪ್ರಯತ್ನಕ್ಕೆ ಇದೆಲ್ಲ ಮಾಡುತ್ತಿದ್ದಾರೆ. ಕೆಲವರು ನನ್ನ ಬಗ್ಗೆ ವಿರೋಧ ಮಾಡುತ್ತಿದ್ದಾರೆ. ಇದೆಲ್ಲ ವೈಯಕ್ತಿಕ ಲಾಭ ನಷ್ಟದಿಂದ ಆಗಿರೋದು. ನಿಜವಾದ ದಲಿತ ವಿರೋಧಿಗಳು ನೀವುಗಳು. ಲಲಿತ ನಾಯಕರಿಂದ ಉದ್ಘಾಟನೆ ಮಾಡಿಸಲು ಮುಂದಾದ್ರಿ. ಆಕೆಯ ಪುತ್ರ ಅಂಬೇಡ್ಕರ್ ಪುತ್ಥಳಿಗೆ ಮದ್ಯ ಕುಡಿಸಿದ್ದ. ನೀವು ಅಂಬೇಡ್ಕರ್ ವಾದಿಗಳು ಅಂತೀರಾ. ಆದರೆ ಅಂಬೇಡ್ಕರ್ ಪುತ್ಥಳಿಗೆ ಹೆಂಡ ಕುಡಿಸಿದ ತಾಯಿಯಿಂದ ಉದ್ಘಾಟನೆ ಮಾಡಿಸುತ್ತಿದ್ದೀರಿ ಎಂದು ಕಿಡಿಕಾರಿದರು.

ಸುಮ್ಮನೆ ನನ್ನ ದಲಿತ ವಿರೋಧಿ ಅಂತ ಹೇಳೋದು ಬೇಡ. ಮೈಸೂರಿಗರ ಬಳಿ ಹೋರಾಟದ ಗುಣ ಇಲ್ಲ ಅಂತ ಅಂದುಕೊಳ್ಳಬೇಡಿ. ನಿಮ್ಮ ಮನೆಯಲ್ಲಿ ನಿಮ್ಮ ಹೆಂಡತಿ ಮಹಿಷಾ ಪೋಟೋ ಇಟ್ಟುಕೊಳ್ಳೊಕೆ ಬಿಡ್ತಾರ? ನಿಮ್ಮ ಮನೆಯಲ್ಲೇ ಬೇಕಾದರೆ ಮಹಿಷಾ ದಸರಾ ಮಾಡಿಕೊಳ್ಳಿ. ಬೆಟ್ಟಕ್ಕೆ ಹೋಗಿ ಚಾಮುಂಡಿಗೆ ಅಪಮಾನ ಮಾಡಬೇಕು ಅಂತ ನೀವು ಅಲ್ಲಿ ಹೋಗೋದು. ಕೆಲವರಿಗೆ ಅರ್ಥವಾಗಬೇಕು ಅಂತ ನಿಮ್ಮ ಭಾಷೆಯಲ್ಲಿ ಹೇಳಿರೋದು. ಇಂತಹವರನ್ನು ವಿರೋಧಿಸದಿದ್ದರೆ ಮುಂದೆ ಇಸ್ರೇಲ್ ಪರಿಸ್ಥಿತಿ ನಿರ್ಮಾಣ ವಾಗುತ್ತೆ ಎಂದು ಹೇಳಿದರು.

lokesh

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

22 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

22 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

22 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

22 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

22 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

22 hours ago