Categories: ಮೈಸೂರು

ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ: ರಕ್ಷಿಸುತ್ತಿರುವವರು ಯಾರು: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಅರೆಸ್ಟ್ ವಾರೆಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ ಎಂದು ಆಗ್ರಹಿಸಿದರು.

ಮೈಸೂರು ವಿಮಾನ‌ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಅದಾನಿಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆ ಪದೇ ಪದೇ ಹರಾಜಾಗುತ್ತಿದೆ. ಅದಾನಿಗೆ ರಕ್ಷಣೆ ಕೊಡುತ್ತಿರುವವರು ಯಾರು ಎನ್ನುವುದು ದೇಶಕ್ಕೇ ಗೊತ್ತಿದೆ. ನಿಮಗೆ ಗೊತ್ತಿಲ್ವಾ? ಈ ಸತ್ಯವನ್ನು ಮಾಧ್ಯಮಗಳು ದೇಶದ ಜನರಿಗೆ ಏಕೆ ತೋರಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ರಾಜ್ಯದ ರೈತರಿಗೆ ಕೇಂದ್ರ ಮಾಡಿದ ಅನ್ಯಾಯ ಸರಿಯಾ?

ರೈತರಿಗೆ ರಿಯಾಯ್ತಿ ಬಡ್ಡಿ ದರದಲ್ಲಿ ಕೊಡುವ ಸಾಲದ ಮೊತ್ತವನ್ನು ನಬಾರ್ಡ್ ಈ ಬಾರಿ ಶೇ 58 ರಷ್ಟು ರಾಜ್ಯಕ್ಕೆ ಕಡಿತಗೊಳಿಸಿದೆ. ಇದು ರಾಜ್ಯದ ರೈತರಿಗೆ ಮಾಡಿದ ಪರಮ ಅನ್ಯಾಯ. ರಾಜ್ಯದ ರೈತರಿಗೆ ಕೇಂದ್ರ ಅನ್ಯಾಯ ನಾಡಿದ್ದು ಸರಿ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದರೆ ಮಣ್ಣಿನ ಮಗ, ರೈತರ ಮಗ ಅಂದುಕೊಂಡಿರುವ ಹೆಚ್.ಡಿ.ಕುಮಾರಸ್ವಾಮಿಯವರು ಉಸಿರೇ ಬಿಡ್ತಿಲ್ಲವಲ್ಲ ಏಕೆ ಎಂದು ಪ್ರಶ್ನಿಸಿದರು.

ವರ್ಷದಿಂದ ವರ್ಷಕ್ಕೆ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಕೊಡುವ ಸಾಲದ ಪ್ರಮಾಣ ಹೆಚ್ಚಾಗಬೇಕು. ಆದರೆ ಈ ಬಾರಿ ಕಡಿತಗೊಳಿಸಿದೆ.

ರೈತರಿಗೆ ಶೇ4.5 ಬಡ್ಡಿದರದಲ್ಲಿ ನಬಾರ್ಡ್ ರಾಜ್ಯದ ರೈತರಿಗೆ ಸಾಲ ಕೊಡುತ್ತದೆ. ಈ ಬಡ್ಡಿಯನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. ಆದರೆ ಈಗ ನಬಾರ್ಡ್ ಸಾಲದ ಪ್ರಮಾಣ ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕ್ ಗಳ ಬಳಿ ಸಾಲಕ್ಕೆ ಹೋಗಿ ಶೇ10 ರಷ್ಟು ಬಡ್ಡಿ ಕಟ್ಟಬೇಕು. ಇದು ರಾಜ್ಯಕ್ಕೆ ಆಗುವ ನಷ್ಟ. ಇಷ್ಟು ದೊಡ್ಡ ಪ್ರಮಾಣದ ಅನ್ಯಾಯವನ್ನು ಜೋಶಿ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದಿಂದಲೇ ಆಯ್ಕೆ ಆಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಅನ್ಯಾಯ ಸರಿ ಪಡಿಸಿ ಎಂದು ಮನವಿ ಕೊಟ್ಟಿದ್ದೇನೆ. ರಾಜ್ಯದ ರೈತರ ಬಗ್ಗೆ ಕಾಳಜಿ ಇದ್ದರೆ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಅನ್ಯಾಯ ಸರಿಪಡಿಸಲಿ ಎಂದು ಸವಾಲು ಹಾಕಿದರು.‌

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

6 hours ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

7 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

7 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

7 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

8 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

8 hours ago