ಮೈಸೂರು

ಶಬರಿಯಂತೆ ಸಿಹಿಯನ್ನು ಮಾತ್ರ ರಾಮನಿಗೆ ನೈವೇದ್ಯ ಮಾಡಿದರಾಗದೇ!

ಕಾದಿರುವಳು ಶಬರಿ..

ದಟ್ಟ ಕಾನನದ ಕಡು ಘೋರ ಕತ್ತಲಲೂ
ಪುಟ್ಟ ದೀಪವೊಂದನುರಿಸಿ ಕಾದಿರುವಳು ಶಬರಿ,
ಹಣ್ಣಾಗಿಹ ಮೈಮನಗಳ ಸಿಹಿ ಹಣ್ಣು ಹೆಕ್ಕಲೆಂದೇ ದಣಿಸಿ,
ಮೈಮನಗಳ ಕಣ್ಣಾಗಿಸಿ ಕಾದಿರುವಳು ಶಬರಿ.

ಶಬರಿ ಮಾತೆಯ ತಪ ಬರಿಯ ಪದಗಳಿಂದ ವರ್ಣಿಸಲು ಸಾಧ್ಯವಿಲ್ಲ. ರಾಮಾಯಣದ ಕಾಲಮಾನಕ್ಕೂ ವರ್ತಮಾನಕ್ಕೂ ಯುಗಯುಗಾಂತರದ ಅಂತರ. ಅದು ತ್ರೇತಾಯುಗ, ಇದು ಕಲಿಯುಗ. ಆದರೂ ಶಬರಿ ಮಾತೆಯ ತಪೋಬಲ,‌ ಉಪಾಸನೆ ಬೆಟ್ಟದಷ್ಷು, ಅದಕ್ಕೇ ಇರಬೇಕು ಸ್ವಾಮಿ ಅಯ್ಯಪ್ಪ ನೆಲೆಸಿರುವ ಕ್ಷೇತ್ರದ ಹೆಸರೇ ಶಬರಿ ಬೆಟ್ಟ ಅಥವಾ ಶಬರಿಮಲೆ!

ಭವ್ಯ ಭಾರತ ತನ್ನ ಮರ್ಯಾದಾಪುರುಷೋತ್ತಮನ್ನು ಅಯೋಧ್ಯೆಯಲ್ಲಿ ಪ್ರತಿಷ್ಟಾಪಿಸಲು ಸಿದ್ಧವಾಗುತ್ತಿರುವಂತೆಯೇ ರಾಮಾಯಣ ಮತ್ತು ಮಹಾಭಾರತಗಳು ಎಂದಿಗಿಂತ ಇಂದು ಪ್ರಸ್ತುತವೆನಿಸುತ್ತದೆ. ಶಬರಿ ಕಾಯುವಿಕೆಯಲ್ಲಿ ಕಲಿಯುವಿಕೆ ಬಹಳಷ್ಟಿದೆ. ನಿತ್ಯ ಶ್ರೀರಾಮನ ಆಗಮನದ ಆಕಾಂಕ್ಷೆಯಲಿ,‌ ಅವನ ಸತ್ಕರಿಸಿ ಉಪಚರಿಸಲಿಕ್ಕಾಗಿ ಪ್ರತಿ ದಿನ ಹಣ್ಣುಗಳನ್ನು ಆರಿಸಿ ಆಯ್ದು ಕಾದಿರುತ್ತಿದ್ದಳು. ಇದು ಶಬರಿ ಮಾತೆಯ ನಿತ್ಯ ಕಾಯಕ.

ಆಯ್ದ ಹಣ್ಣುಗಳಲ್ಲಿ ಕಹಿಯಾಗಿದ್ದವು ಎಷ್ಟೋ? ಒಗಚು ಒಗರು ಎಷ್ಟೋ? ಹುಳಿಯಾಗಿದ್ದವದೆಷ್ಟೋ? ಇದೆಲ್ಲದರ ನಡುವೆ ಆರಿಸಿ ಆರಿಸಿ ಶ್ರೀರಾಮನಿಗಾಗಿ ಅತ್ಯುತ್ತಮವಾದ ಹಣ್ಣುಗಳನ್ನು ಬೇರ್ಪಡಿಸುವ ಸಂಭ್ರಮ. ಒಂದು ಸಿಹಿ ಹಣ್ಣು ಕಚ್ಚುವ ಮೊದಲ ಎರಡು ಹುಳಿಯಿದ್ದಿರಬಹುದು, ಹತ್ತು ಕಾರ್ಕೋಟಕ ಕಹಿ, ಒಂದೆರಡು ಒಗಚು. ಇವಿಷ್ಟರಲ್ಲೇ ಶಬರಿಯ ನಾಲಿಗೆ ಜಡ್ಡು ಹಿಡಿದಿರಬಹುದು. ಆದರೂ ಅನುದಿನದ ಪ್ರಯತ್ನ. ಕಹಿ, ಹುಳಿ, ಒಗಚೆಲ್ಲಾ ಹೊರಗೆ, ಸಿಹಿ ಸಿಹಿಯಾದ ಹಣ್ಣುಗಳು ಮಾತ್ರ ಶ್ರೀರಾಮನಿಗೆ.

ನಮ್ಮ ನಿಮ್ಮ ಬದುಕಿನ ಅನುಭವವೂ ಇದೇ ತಾನೇ, ಎಂದಾದರೊಂದು ದಿನ ಶ್ರೀರಾಮ ದರ್ಶನ ಭಾಗ್ಯ ದೊರೆಕೀತೆಂಬ ಶಬರಿ ಆಕಾಂಕ್ಷೆಯವರೇ ತಾನೇ! ನಮ್ಮ ಜೀವನದ ಅನುಭವಗಳನ್ನು ನೋಡಿದಾಗ, ಅವೂ ಕೂಡ ಈ ಶಬರಿ ಆರಿಸಿಟ್ಟ ಹಣ್ಣುಗಳಂತೆಯೇ. ಕೆಲವು ಕಹಿ, ಹಲವು ಹುಳಿ, ಅಲ್ಲೊಂದು ಇಲ್ಲೊಂದು ಸಿಹಿ. ಆದರೆ ನಾವು, ಸಿಹಿಯನ್ನು ಮರೆತು ಬರೀ ಕಹಿ ಹುಳಿ ಹಳೆಯ ನೆನಪುಗಳನ್ನು ಮೆಲುಕು ಹಾಕುತ್ತಾ ಬದುಕಿಗೇ ಹುಳಿ ಹಿಂಡಿಕೊಳ್ಳುತ್ತೀವಿ. ಶಬರಿ ಹಾಗೇ ನಾವೂ ಕಹಿ ಹುಳಿ ಹೊರಗೆಸೆದು ಸಿಹಿಯಾದದ್ದನ್ನೆಲ್ಲಾ ಶ್ರೀರಾಮನಿಗೆ ನೈವೇದ್ಯ ಮಾಡಿದರಾಗದೇ?

ಹೃದಯ ಹೂದೋಟವಾಗಿರಲಿ,
ದುರ್ವಾಸನೆಯ ಗೊಬ್ಬರದಲರಳಿ
ಸುವಾಸನೆಯ ಸುತ್ತ ಪಸರಿಸುವಂತೆ
ಹೃದಯ ಹೂದೋಟವಾಗಿರಲಿ.

 

 – ಅನಿರುದ್ಧಪದ್ಮನಾಭ, ಮೈಸೂರು

andolanait

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

31 mins ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

3 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

4 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

6 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

7 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

11 hours ago