ಮೈಸೂರು

ಸಾಧನಾ ಸಮಾವೇಶ ಏತಕ್ಕೆ : ಸರ್ಕಾರಕ್ಕೆ ವಿಶ್ವನಾಥ್‌ ಪ್ರಶ್ನೆ

ಮೈಸೂರು : ರಾಜ್ಯ ಸರ್ಕಾರವು ತಮ್ಮ ವೈಫಲ್ಯಗಳನ್ನು ಮರೆ ಮಾಚಿ ಜನರ ಗಮನ ಬೇರೆಡೆಗೆ ಸೆಳೆಯಲು ಜನರ ದುಡ್ಡಿನಲ್ಲಿ ಸಾಧನಾ ಸಮಾವೇಶ ಮಾಡುತ್ತಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಟೀಕಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಏನು ಸಾಧನೆ ಮಾಡಿದೆ ಎಂದು ಸಾಧನಾ ಸಮಾವೇಶ ಮಾಡುತ್ತಿದೆ? ಹೆಲಿಕಾಪ್ಟರ್‌ನಲ್ಲಿ ಓಡಾಡಿರುವುದೇ ಸಾಧನೆಯೇ ಎಂದು ಪ್ರಶ್ನಿಸಿದ್ದಾರೆ.

ಸಾಧನಾ ಸಮಾವೇಶದಲ್ಲಿ ಸಿಎಂ ಸೇರಿದಂತೆ ಎಲ್ಲಾ ಸಚಿವರ ಆಸ್ತಿಯ ವಿವರಗಳನ್ನು ಬಹಿರಂಗಪಡಿಸಬೇಕು. ಮುಖ್ಯಮಂತ್ರಿಗಳೇ ನಿಮ್ಮ ಸ್ವಂತ ಜಿಲ್ಲೆಯಲ್ಲಿ ಏನು ಅಭಿವೃದ್ದಿ ಮಾಡಿದ್ದೀರಾ ಹೇಳಿ? ಇದನ್ನು ನಿಮ್ಮ ಸಾಧನಾ ಸಮಾವೇಶದಲ್ಲಿ ತಿಳಿಸಬೇಕು. ನಿಮ್ಮ ಕಟು ಮಾತಿನಿಂದ ಎಷ್ಟು ಸರ್ಕಾರಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದನ್ನು ತಿಳಿಸಬೇಕು. ಮುಡಾ ಹಗರಣದ ಬಗ್ಗೆಯೂ ತಿಳಿಸಬೇಕು. ಇಲ್ಲದಿದ್ದರೆ ನಾವು ಕೂಡ ಸಮಾವೇಶ ಮಾಡಿ ನಿಮ್ಮ ವೈಫಲ್ಯ ಗಳನ್ನು ಜನರ ಮುಂದಿಡುತ್ತೇವೆ ಎಂದು ವಾಗ್ದಾಳಿ ನಡೆಸಿದರು.

ಜನರಿಗೆ ಟೋಪಿ ಹಾಕಲು ಸಮಾವೇಶ:- ರಾಜ್ಯ ಸರ್ಕಾರ ಜನರಿಗೆ ಟೋಪಿ ಹಾಕಲು ಸಾಧನಾ ಸಮಾವೇಶ ಮಾಡುತ್ತಿದೆ. ಬರೀ ಚಮಚಗಳ ಕೈಯಲ್ಲಿ ಹೊಗಳಿಸಿ ಕೊಳ್ಳುವುದೆ ಸಿದ್ದರಾಮಯ್ಯ ಕೆಲಸ. ಇದೊಂದು ಪಬ್ಲಿಸಿಟಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಎಲ್ಲಾ ಜಿಲ್ಲಾ ಮಂತ್ರಿಗಳು ಕಾಂಟ್ರ್ಯಾಕ್ಟ್, ವರ್ಗಾವಣೆ ಕಮೀಷನ್ ನಲ್ಲಿ ಮುಳುಗಿದ್ದಾರೆ. ಗ್ರೇಟರ್ ಮೈಸೂರು ಮಾಡಲು ಹೊರಟ್ಟಿದ್ದರು. ವ್ಯಾಪಾರ ಸರಿ ಆಗಲಿಲ್ಲ ಹೀಗಾಗಿ ಇದು ಮುಂದೂಡಲಾಗಿದೆ ಎಂದು ಟೀಕಿಸಿದರು.

ಕುರುಬರಿಗೆ, ಹಿಂದುಳಿದವರಿಗೆ ಏನ್ ಮಾಡಿದ್ದಿರಿ ಹೇಳಿ ಸಿದ್ದರಾಮಯ್ಯ. ಇದು ಹುಚ್ಚರ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಹುಚ್ಚರು ಮಾಡಬೇಕು ಅಷ್ಟೆ. ನೀರಾವರಿ ಇಲಾಖೆ ಯಲ್ಲಿ ಒಂದು ಕೆಲಸ ಆಗಿದ್ದಿಯಾ? ಈ ಇಲಾಖೆನಾ ಕಿಕ್ ಬ್ಯಾಕ್ ಗೆ ಇಟ್ಟು ಕೊಳ್ಳಲಾಗಿದೆ ಎಂದು ಟೀಕಿಸಿದರು.

ಆಂದೋಲನ ಡೆಸ್ಕ್

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

8 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

21 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

21 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

21 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

22 hours ago