ಮೈಸೂರು

ಸಾಧನಾ ಸಮಾವೇಶ ಏತಕ್ಕೆ : ಸರ್ಕಾರಕ್ಕೆ ವಿಶ್ವನಾಥ್‌ ಪ್ರಶ್ನೆ

ಮೈಸೂರು : ರಾಜ್ಯ ಸರ್ಕಾರವು ತಮ್ಮ ವೈಫಲ್ಯಗಳನ್ನು ಮರೆ ಮಾಚಿ ಜನರ ಗಮನ ಬೇರೆಡೆಗೆ ಸೆಳೆಯಲು ಜನರ ದುಡ್ಡಿನಲ್ಲಿ ಸಾಧನಾ ಸಮಾವೇಶ ಮಾಡುತ್ತಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಟೀಕಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಏನು ಸಾಧನೆ ಮಾಡಿದೆ ಎಂದು ಸಾಧನಾ ಸಮಾವೇಶ ಮಾಡುತ್ತಿದೆ? ಹೆಲಿಕಾಪ್ಟರ್‌ನಲ್ಲಿ ಓಡಾಡಿರುವುದೇ ಸಾಧನೆಯೇ ಎಂದು ಪ್ರಶ್ನಿಸಿದ್ದಾರೆ.

ಸಾಧನಾ ಸಮಾವೇಶದಲ್ಲಿ ಸಿಎಂ ಸೇರಿದಂತೆ ಎಲ್ಲಾ ಸಚಿವರ ಆಸ್ತಿಯ ವಿವರಗಳನ್ನು ಬಹಿರಂಗಪಡಿಸಬೇಕು. ಮುಖ್ಯಮಂತ್ರಿಗಳೇ ನಿಮ್ಮ ಸ್ವಂತ ಜಿಲ್ಲೆಯಲ್ಲಿ ಏನು ಅಭಿವೃದ್ದಿ ಮಾಡಿದ್ದೀರಾ ಹೇಳಿ? ಇದನ್ನು ನಿಮ್ಮ ಸಾಧನಾ ಸಮಾವೇಶದಲ್ಲಿ ತಿಳಿಸಬೇಕು. ನಿಮ್ಮ ಕಟು ಮಾತಿನಿಂದ ಎಷ್ಟು ಸರ್ಕಾರಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದನ್ನು ತಿಳಿಸಬೇಕು. ಮುಡಾ ಹಗರಣದ ಬಗ್ಗೆಯೂ ತಿಳಿಸಬೇಕು. ಇಲ್ಲದಿದ್ದರೆ ನಾವು ಕೂಡ ಸಮಾವೇಶ ಮಾಡಿ ನಿಮ್ಮ ವೈಫಲ್ಯ ಗಳನ್ನು ಜನರ ಮುಂದಿಡುತ್ತೇವೆ ಎಂದು ವಾಗ್ದಾಳಿ ನಡೆಸಿದರು.

ಜನರಿಗೆ ಟೋಪಿ ಹಾಕಲು ಸಮಾವೇಶ:- ರಾಜ್ಯ ಸರ್ಕಾರ ಜನರಿಗೆ ಟೋಪಿ ಹಾಕಲು ಸಾಧನಾ ಸಮಾವೇಶ ಮಾಡುತ್ತಿದೆ. ಬರೀ ಚಮಚಗಳ ಕೈಯಲ್ಲಿ ಹೊಗಳಿಸಿ ಕೊಳ್ಳುವುದೆ ಸಿದ್ದರಾಮಯ್ಯ ಕೆಲಸ. ಇದೊಂದು ಪಬ್ಲಿಸಿಟಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಎಲ್ಲಾ ಜಿಲ್ಲಾ ಮಂತ್ರಿಗಳು ಕಾಂಟ್ರ್ಯಾಕ್ಟ್, ವರ್ಗಾವಣೆ ಕಮೀಷನ್ ನಲ್ಲಿ ಮುಳುಗಿದ್ದಾರೆ. ಗ್ರೇಟರ್ ಮೈಸೂರು ಮಾಡಲು ಹೊರಟ್ಟಿದ್ದರು. ವ್ಯಾಪಾರ ಸರಿ ಆಗಲಿಲ್ಲ ಹೀಗಾಗಿ ಇದು ಮುಂದೂಡಲಾಗಿದೆ ಎಂದು ಟೀಕಿಸಿದರು.

ಕುರುಬರಿಗೆ, ಹಿಂದುಳಿದವರಿಗೆ ಏನ್ ಮಾಡಿದ್ದಿರಿ ಹೇಳಿ ಸಿದ್ದರಾಮಯ್ಯ. ಇದು ಹುಚ್ಚರ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಹುಚ್ಚರು ಮಾಡಬೇಕು ಅಷ್ಟೆ. ನೀರಾವರಿ ಇಲಾಖೆ ಯಲ್ಲಿ ಒಂದು ಕೆಲಸ ಆಗಿದ್ದಿಯಾ? ಈ ಇಲಾಖೆನಾ ಕಿಕ್ ಬ್ಯಾಕ್ ಗೆ ಇಟ್ಟು ಕೊಳ್ಳಲಾಗಿದೆ ಎಂದು ಟೀಕಿಸಿದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

12 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

13 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

13 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

13 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

13 hours ago