died trAacter
ನಂಜನಗೂಡು : ದರೋಡೆ ಸ್ಕೆಚ್ ರೂಪಿಸಿ ಪತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿಸಿ ಕೊಲೆ ಯತ್ನಕ್ಕೆ ಒಳಗಾಗಿದ್ದ ಪತಿ ರಾಜೇಂದ್ರ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ಸಾವೀಗಿಡಾಗಿದ್ದಾನೆ.
೨೦ ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಇಂದು ಸಾವೀಗಿಡಾಡದರು. ಪತಿರಾಜೇಂದ್ರನ ಕೊಲೆಗೆ ದರೋಡೆ ಸ್ಕೆಚ್ ರೂಪಿಸಿದ ಪತ್ನಿ ಸಂಗೀತಾ ಈಗ ಜೈಲು ವಾಸಿಯಾಗಿದ್ದಾಳೆ.
ಇದನ್ನು ಓದಿ: ಬ್ಯಾಂಕ್ ದರೋಡೆ ಪ್ರಕರಣ | ಬಂಧನಕ್ಕೆ 7 ವಿಶೇಷ ತಂಡ ರಚನೆ
ಘಟನೆ ವಿವರ:
ಅಕ್ಟೋಬರ್ ೨೬ ರಂದು ನಂಜನಗೂಡಿನ ಹುಂಡುವಿನಹಳ್ಳಿ ಬಡಾವಣೆಯಲ್ಲಿ ರಾಜೇಂದ್ರ ತನ್ನ ಪತ್ನಿ ಸಂಗೀತಾ ಜೊತೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಕಾರ್ ನಲ್ಲಿ ಬಂದ ಮೂವರು ಅಟ್ಯಾಕ್ ಮಾಡಿ ರಾಜೇಂದ್ರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ದರೋಡೆ ಪ್ರಕರಣ ದಾಖಲಿಸಿಕೊಂಡ ನಂಜನಗೂಡು ಟೌನ್ ಪೊಲೀಸರು ವಿಶೇಷ ತಂಡ ರಚಿಸಿ ದುಷ್ಕರ್ಮಿಗಳ ಸೆರೆಗೆ ಜಾಲ ಬೀಸಿದ್ದರು. ಸಿ.ಸಿ ಟಿವಿ ಫುಟೇಜ್ ಪರಿಶೀಲಿಸಿದ ಪೊಲೀಸರಿಗೆ ಪತ್ನಿ ಸ್ಕೆಚ್ ಬಯಲಾಗಿತ್ತು. ಪತಿ ಕೊಲೆಗೆ ದರೋಡೆ ಬಣ್ಣ ಕಟ್ಟಿ ಸುಪಾರಿ ನೀಡಿ ಹತ್ಯೆಗೆ ಯತ್ನಿಸಿದ ಸಂಚು ಬಯಲಾಗಿತ್ತು. ತೀವ್ರ ಹಲ್ಲೆಗೆ ಒಳಗಾಗಿದ್ದ ರಾಜೇಂದ್ರ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾಯಾಗದೆ ರಾಜೇಂದ್ರ ಮೃತಪಟ್ಟಿದ್ದಾನೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಆರು ಹಸುಗಳು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ…
ನವೀನ್ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ…
ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಭಾಗಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಕೆಲವು ಚಾಲಕರು ಗಾಂಜಾ ಸೇವಿಸಿ ವಾಹನ ಚಾಲನೆ…
ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ…
ನಂಜನಗೂಡು ತಾಲ್ಲೂಕು ಬೆಳಗುಂದ ಗ್ರಾಮದಲ್ಲಿ ಬಸ್ ತಂಗುದಾಣವಿಲ್ಲದೆ ಪ್ರತಿದಿನ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲಿಯೇ…
ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್ಗಳ ಮೇಲೆ ಅಳವಡಿಸಿರುವ ಗುಟ್ಕಾ ಹಾಗೂ ತಂಬಾಕು…