died trAacter
ನಂಜನಗೂಡು : ದರೋಡೆ ಸ್ಕೆಚ್ ರೂಪಿಸಿ ಪತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿಸಿ ಕೊಲೆ ಯತ್ನಕ್ಕೆ ಒಳಗಾಗಿದ್ದ ಪತಿ ರಾಜೇಂದ್ರ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ಸಾವೀಗಿಡಾಗಿದ್ದಾನೆ.
೨೦ ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಇಂದು ಸಾವೀಗಿಡಾಡದರು. ಪತಿರಾಜೇಂದ್ರನ ಕೊಲೆಗೆ ದರೋಡೆ ಸ್ಕೆಚ್ ರೂಪಿಸಿದ ಪತ್ನಿ ಸಂಗೀತಾ ಈಗ ಜೈಲು ವಾಸಿಯಾಗಿದ್ದಾಳೆ.
ಇದನ್ನು ಓದಿ: ಬ್ಯಾಂಕ್ ದರೋಡೆ ಪ್ರಕರಣ | ಬಂಧನಕ್ಕೆ 7 ವಿಶೇಷ ತಂಡ ರಚನೆ
ಘಟನೆ ವಿವರ:
ಅಕ್ಟೋಬರ್ ೨೬ ರಂದು ನಂಜನಗೂಡಿನ ಹುಂಡುವಿನಹಳ್ಳಿ ಬಡಾವಣೆಯಲ್ಲಿ ರಾಜೇಂದ್ರ ತನ್ನ ಪತ್ನಿ ಸಂಗೀತಾ ಜೊತೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಕಾರ್ ನಲ್ಲಿ ಬಂದ ಮೂವರು ಅಟ್ಯಾಕ್ ಮಾಡಿ ರಾಜೇಂದ್ರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ದರೋಡೆ ಪ್ರಕರಣ ದಾಖಲಿಸಿಕೊಂಡ ನಂಜನಗೂಡು ಟೌನ್ ಪೊಲೀಸರು ವಿಶೇಷ ತಂಡ ರಚಿಸಿ ದುಷ್ಕರ್ಮಿಗಳ ಸೆರೆಗೆ ಜಾಲ ಬೀಸಿದ್ದರು. ಸಿ.ಸಿ ಟಿವಿ ಫುಟೇಜ್ ಪರಿಶೀಲಿಸಿದ ಪೊಲೀಸರಿಗೆ ಪತ್ನಿ ಸ್ಕೆಚ್ ಬಯಲಾಗಿತ್ತು. ಪತಿ ಕೊಲೆಗೆ ದರೋಡೆ ಬಣ್ಣ ಕಟ್ಟಿ ಸುಪಾರಿ ನೀಡಿ ಹತ್ಯೆಗೆ ಯತ್ನಿಸಿದ ಸಂಚು ಬಯಲಾಗಿತ್ತು. ತೀವ್ರ ಹಲ್ಲೆಗೆ ಒಳಗಾಗಿದ್ದ ರಾಜೇಂದ್ರ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾಯಾಗದೆ ರಾಜೇಂದ್ರ ಮೃತಪಟ್ಟಿದ್ದಾನೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…