ಮೈಸೂರು

ನಾಡಿನತ್ತ ಕಾಡುಪ್ರಾಣಿ ; ಸಫಾರಿ ಚಟುವಟಿಕೆಗೆ ಕಡಿವಾಣ ಹಾಕಿ : ಅಧಿಕಾರಿಗಳಿಗೆ ಸಿ.ಎಂ ಸೂಚನೆ

ಮೈಸೂರು : ಅಕ್ಟೋಬರ್‌ನಲ್ಲಿ ಎರಡು ವಾರಗಳ ಅವಧಿಯಲ್ಲಿ ಮೂವರು ರೈತರು ಸಾವಿಗೀಡಾದ ನಂತರ, ಮೈಸೂರಿನ ಅರಣ್ಯ ಪ್ರದೇಶಗಳಲ್ಲಿ ಸಫಾರಿ ಚಟುವಟಿಕೆಗಳನ್ನು ಕಡಿಮೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಅರಣ್ಯ ವಲಯಗಳಲ್ಲಿ ಹೆಚ್ಚುತ್ತಿರುವ ಮಾನವ ಚಟುವಟಿಕೆಯಿಂದಾಗಿ ನೀರು ಮತ್ತು ಆಹಾರವನ್ನು ಅರಸಿ ಕಾಡು ಪ್ರಾಣಿಗಳು ನಾಡಿಗೆ ಬರುತ್ತಿವೆ ಎಂದು ಅವರು ಹೇಳಿದರು.

ಇದನ್ನು ಓದಿ; ಮೈಸೂರಿನಲ್ಲಿ ಹೆಚ್ಚುತ್ತಿರುವ ಹುಲಿ ಓಡಾಟ ವದಂತಿ: ಅರಣ್ಯ ಇಲಾಖೆ ಮಾಧ್ಯಮ ಪ್ರಕಟಣೆ

ಅರಣ್ಯ ಪ್ರದೇಶದಲ್ಲಿ ಜನರ ಓಡಾಟ ಹೆಚ್ಚಾಗಿದೆ ಮತ್ತು ರೆಸಾರ್ಟ್‌ಗಳು ತಲೆ ಎತ್ತಿವೆ. ಇದಲ್ಲದೆ, ಸಫಾರಿ ಚಟುವಟಿಕೆಗಳು ಹೆಚ್ಚಿವೆ, ಹೀಗಾಗಿ ಕಾಡು ಪ್ರಾಣಿಗಳು ನೀರು ಮತ್ತು ಆಹಾರವನ್ನು ಅರಸಿ ಹಳ್ಳಿಗಳಿಗೆ ಬರುತ್ತಿವೆ ಎಂದು ತಿಳಿಸಿದರು.

ನಿನ್ನೆ ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆದಿತ್ತು. ಶೀಘ್ರದಲ್ಲೇ ಮತ್ತೊಮ್ಮೆ ಸಭೆ ನಡೆಸುತ್ತೇನೆ. ಅಕ್ರಮ ರೆಸಾರ್ಟ್‌ಗಳ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಮತ್ತು ಕಾಡಿನಲ್ಲಿ ಸಫಾರಿ ಚಟುವಟಿಕೆಗಳನ್ನು ಕಡಿಮೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

53 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

58 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

1 hour ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

1 hour ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

10 hours ago