ಮೈಸೂರು

ಸರಗೂರು| ಕಾಡಾನೆ ದಾಳಿ: ಇಬ್ಬರು ರೈತರಿಗೆ ಗಂಭೀರ ಗಾಯ

ಸರಗೂರು: ಜಮೀನಿನಲ್ಲಿ ಟ್ರಾಕ್ಟರ್‌ನಿಂದ ಉಳುಮೆ ಮಾಡುತ್ತಿದ್ದ ಇಬ್ಬರು ರೈತರ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ್ದು, ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ತಾಲ್ಲೂಕಿನ ಹಲಸೂರು ಗ್ರಾಮದ ಪರಶಿವನಾಯಕ, ಇವರ ಚಿಕ್ಕಪ್ಪ ಶಿವಣ್ಣ ಎಂಬುವವರೇ ಗಾಯಗೊಂಡಿರುವ ರೈತರಾಗಿದ್ದಾರೆ. ಇವರಿಬ್ಬರೂ ಸರಗೂರು ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪರಶಿವನಾಯಕ ಮತ್ತು ಶಿವಣ್ಣ ಇಬ್ಬರೂ ಹಲಸೂರು ಗ್ರಾಮದ ಚಾಮನಾಯಕ ಎಂಬವರ ಜಮೀನಿನಲ್ಲಿ ಉಳುಮೆ ಮಾಡಲು ಟ್ರಾಕ್ಟರ್‌ನಲ್ಲಿ ಬೆಳಿಗ್ಗೆ ೭ ಗಂಟೆಯ ಸಮಯದಲ್ಲಿ ತೆರಳಿದ್ದರು. ಜಮೀನಿನಲ್ಲಿ ಉಳುಮೆ ಮಾಡುವಾಗ ಗ್ರಾಮದ ಸಮೀಪದಲ್ಲಿರುವ ನುಗು ವನ್ಯಜೀವಿ ವಲಯದಿಂದ ಸರಗೂರು ವಲಯದ ಅಂಚಿನ ಹಲಸೂರು ಗುಡ್ಡದಿಂದ ಬಂದ ಒಂಟಿಸಲಗವೊಂದು ಟ್ರಾಕ್ಟರ್ ಮೇಲೆ ಏಕಾಏಕಿ ದಾಳಿ ನಡೆಸಿದೆ.

ಈ ವೇಳೆ ಟ್ರಾಕ್ಟರ್‌ನಲ್ಲಿದ್ದ ಪರಶಿವನಾಯಕ ಅವರ ಕಣ್ಣಿನ ಭಾಗಕ್ಕೆ ಆನೆ ದಂತದಿಂದ ಏಟು ಬಿದ್ದಿದ್ದು, ಶಿವಣ್ಣ ಅವರಿಗೂ ಗಂಭೀರ ಗಾಯಗಳಾಗಿವೆ. ವಿಷಯ ತಿಳಿದು ಕೂಡಲೇ ಗ್ರಾಮಸ್ಥರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಆಸ್ಪತ್ರೆಗೆ ಅಧಿಕಾರಿಗಳ ಭೇಟಿ: ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ನಂತರ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ನುಗು ವನ್ಯಜೀವಿ ವಲಯ ಆರ್‌ಎಫ್‌ಒ ವಿವೇಕ್ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸಾ ವೆಚ್ಚವನ್ನು ಅರಣ್ಯ ಇಲಾಖೆಯಿಂದ ಭರಿಸಲಾಗುವುದು. ಕಾಡಾನೆಯನ್ನು ಅರಣ್ಯಕ್ಕೆ ಓಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

28 mins ago

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

3 hours ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

3 hours ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

4 hours ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

4 hours ago

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

7 hours ago