ಮೈಸೂರು

ಸರಗೂರು| ಕಾಡಾನೆ ದಾಳಿ: ಇಬ್ಬರು ರೈತರಿಗೆ ಗಂಭೀರ ಗಾಯ

ಸರಗೂರು: ಜಮೀನಿನಲ್ಲಿ ಟ್ರಾಕ್ಟರ್‌ನಿಂದ ಉಳುಮೆ ಮಾಡುತ್ತಿದ್ದ ಇಬ್ಬರು ರೈತರ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ್ದು, ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ತಾಲ್ಲೂಕಿನ ಹಲಸೂರು ಗ್ರಾಮದ ಪರಶಿವನಾಯಕ, ಇವರ ಚಿಕ್ಕಪ್ಪ ಶಿವಣ್ಣ ಎಂಬುವವರೇ ಗಾಯಗೊಂಡಿರುವ ರೈತರಾಗಿದ್ದಾರೆ. ಇವರಿಬ್ಬರೂ ಸರಗೂರು ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪರಶಿವನಾಯಕ ಮತ್ತು ಶಿವಣ್ಣ ಇಬ್ಬರೂ ಹಲಸೂರು ಗ್ರಾಮದ ಚಾಮನಾಯಕ ಎಂಬವರ ಜಮೀನಿನಲ್ಲಿ ಉಳುಮೆ ಮಾಡಲು ಟ್ರಾಕ್ಟರ್‌ನಲ್ಲಿ ಬೆಳಿಗ್ಗೆ ೭ ಗಂಟೆಯ ಸಮಯದಲ್ಲಿ ತೆರಳಿದ್ದರು. ಜಮೀನಿನಲ್ಲಿ ಉಳುಮೆ ಮಾಡುವಾಗ ಗ್ರಾಮದ ಸಮೀಪದಲ್ಲಿರುವ ನುಗು ವನ್ಯಜೀವಿ ವಲಯದಿಂದ ಸರಗೂರು ವಲಯದ ಅಂಚಿನ ಹಲಸೂರು ಗುಡ್ಡದಿಂದ ಬಂದ ಒಂಟಿಸಲಗವೊಂದು ಟ್ರಾಕ್ಟರ್ ಮೇಲೆ ಏಕಾಏಕಿ ದಾಳಿ ನಡೆಸಿದೆ.

ಈ ವೇಳೆ ಟ್ರಾಕ್ಟರ್‌ನಲ್ಲಿದ್ದ ಪರಶಿವನಾಯಕ ಅವರ ಕಣ್ಣಿನ ಭಾಗಕ್ಕೆ ಆನೆ ದಂತದಿಂದ ಏಟು ಬಿದ್ದಿದ್ದು, ಶಿವಣ್ಣ ಅವರಿಗೂ ಗಂಭೀರ ಗಾಯಗಳಾಗಿವೆ. ವಿಷಯ ತಿಳಿದು ಕೂಡಲೇ ಗ್ರಾಮಸ್ಥರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಆಸ್ಪತ್ರೆಗೆ ಅಧಿಕಾರಿಗಳ ಭೇಟಿ: ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ನಂತರ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ನುಗು ವನ್ಯಜೀವಿ ವಲಯ ಆರ್‌ಎಫ್‌ಒ ವಿವೇಕ್ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸಾ ವೆಚ್ಚವನ್ನು ಅರಣ್ಯ ಇಲಾಖೆಯಿಂದ ಭರಿಸಲಾಗುವುದು. ಕಾಡಾನೆಯನ್ನು ಅರಣ್ಯಕ್ಕೆ ಓಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

8 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

9 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

9 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

12 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

14 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

15 hours ago