ನಂಜನಗೂಡು : ಇತ್ತೀಚಿನ ದಿನಗಳಲ್ಲಿ ನಂಜನಗೂಡಿನ ಕಾಡಂಚಿನ ಭಾಗಗಳಲ್ಲಿ ಆನೆ ಹಾವಳಿ ಹೆಚ್ಚಾಗಿದೆ. ಕಾಡಾನೆಗಳಿಂದ ತಮ್ಮ ಕೃಷಿ ಉಳಿಸುವ ಜೊತೆಗೆ ತಮ್ಮ ಪ್ರಾಣವನ್ನೂ ಉಳಿಸಿಕೊಳ್ಳಬೇಕಾಗಿ ಪರಿಸ್ಥಿತಿ ರೈತರಿಗೆ ಎದುರಾಗಿದೆ.
ತಾಲ್ಲೂಕಿನ ಬಳ್ಳೂರು ಹುಂಡಿಯ ಮುಖ್ಯರಸ್ತೆಯಲ್ಲಿ ಇಂದು ಬೆಳಗ್ಗೆ 8 ಗಂಟೆಯಲ್ಲಿ ಕಾಣಿಸಿಕೊಂಡ ಐದು ಆನೆಗಳು ರೈತರ ಜಮೀನುಗಳಿಗೆ ನುಗ್ಗಿ ದಾಂಧಲೆ ಎಬ್ಬಿಸಿವೆ.
ಕಾಡಾನೆಗಳು ಜಮೀನುಗಳಿಗೆ ನುಗ್ಗಿ ಕಬ್ಬು, ಬಾಳೆ ಮತ್ತು ಇತರ ಬೆಳೆಗಳನ್ನು ನಾಶಪಡಿಸುತ್ತಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.
ಕೆಲ ದಿನಗಳ ಹಿಂದೆ ಬಳ್ಳೂರುಹುಂಡಿಯ ಬಸವರಾಜು ಮತ್ತು ಮರಿಸ್ವಾಮಿ ಅವರ ಜಮೀನಿನಲ್ಲಿ ಬಾಳೆ, ಕುಂಬಳಕಾಯಿ ಬೆಳೆಯನ್ನು ಹಾನಿ ಮಾಡಿ ಅಪಾರ ನಷ್ಟವನ್ನು ಉಂಟುಮಾಡಿದ್ದವು. ಇದರಿಂದ ರೈತರು ಕಂಗಾಲಾಗಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಈನಡುವೆ, ಇಂದು ಅರಣ್ಯ ಸಿಬ್ಬಂದಿಗಳ ವಾಹನವನ್ನು ಅಡ್ಡಗಟ್ಟಿದ ಸಂತ್ರಸ್ಥ ರೈತ ಆನೆಗಳ ಹಾವಳಿ ತಪ್ಪಿಸುವಂತೆ ಗೋಳಾಡಿದ್ದಾರೆ. ರಾತ್ರಿಯ ವೇಳೆ ಕಾಡಂಚಿನಲ್ಲಿ ಗೇಟ್ಗಳು ಹಾಕದೆ ಇರುವುದರಿಂದಲೇ ಆನೆಗಳು ಗ್ರಾಮಕ್ಕೆ ಬರುತ್ತಿವೆ. ಈ ಬಗ್ಗೆ ಅರಣ್ಯ ಸಿಬ್ಬಂದಿಗಳಿಗೆ ಎಷ್ಟೇ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಇಂದಿನ ಘಟನೆಗೆ ಅರಣ್ಯ ಇಲಾಖೆಯ ಬೇಜವಾಬ್ದಾರಿಯೇ ಕಾರಣ ಎಂದು ದೂಷಿಸಿದ್ದಾರೆ.
ಸದ್ಯ ಆನೆಗಳು ಜನರನ್ನು ಅಟ್ಟಾಡಿಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…
ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…