ಮೈಸೂರು/ಎಚ್.ಡಿ ಕೋಟೆ: ಮೇಕೆಗಳನ್ನು ಮೇಯಿಸುತ್ತಿದ್ದ ಮಹಿಳೆಯನ್ನು ಹುಲಿಯೊಂದು ಹಠಾತ್ ಹೊತ್ತೊಯ್ದ ಘಟನೆ ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಮೂರ್ಬಾಂದ್ ಬೆಟ್ಟದ ಬಳಿ ಶನಿವಾರ (ಮೇ.25) ಸಂಜೆ ವೇಳೆ ನಡೆದಿದೆ.
ಎನ್. ಬೇಗೂರು ಸಮೀಪದ ಮಾಳದ ಹಾಡಿ ನಿವಾಸಿ ಚಿಕ್ಕಿ (48) ಹುಲಿಯಿಂದ ಮೃತರಾದರವಾಗಿದ್ದಾರೆ. ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ಹುಲಿ ಕೊಂಡೊಯ್ಯುತ್ತಿದ್ದ ದೃಶ್ಯವನ್ನು ಕಂಡ ಕುರಿಗಾಹಿ ಗ್ರಾಮಕ್ಕೆ ತೆರಳಿ ವಿಷಯ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಎನ್. ಬೇಗೂರು ಅರಣ್ಯ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಶವದ ಹುಡುಕಾಟ ನಡೆಸಿದ್ದಾರೆ. ಆದರೆ ಇಂದು (ಭಾನುವಾರ, ಮೇ.26) ಬೆಳಿಗ್ಗೆ ಅರಣ್ಯ ವೀಕ್ಷಣೆಯ ಟವರ್ ಮೇಲೆ ಮಹಿಳೆಯ ಮೃತದೇಹ ಕಾಣಿಸಿಕೊಂಡಿದೆ.
ಈ ಸಂಬಂಧ ಅಂತರಸಂತ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…