ಮೈಸೂರು

ಪಕ್ಷಕ್ಕೂ ದ್ರೋಹ ಮಾಡುವುದಿಲ್ಲ ಪಕ್ಕದವರಿಗೂ ದ್ರೋಹ ಮಾಡುವುದಿಲ್ಲ : ಪ್ರತಾಪ್‌ ಸಿಂಹ

ಮೈಸೂರು : ಬಿಜೆಪಿ ಪಕ್ಷ  ನನ್ನ ತಾಯಿ ಇದ್ದಂತ್ತೆ. ಯಾವುದೇ ಕಾರಣಕ್ಕೂ ಪಕ್ಷಕ್ಕಾಗಲಿ ಪಕ್ಕದವರಿಗಾಗಲಿ ದ್ರೋಹ ಮಾಡುವ ಮಾತೇ ಇಲ್ಲ ಎಂದು ಸಂಸದ ಪ್ರತಾಪ್‌ ಸಿಂಹ ತಿಳಿಸಿದರು.

ಸಂಸದ್‌ ಪ್ರತಾಪ್‌ ಸಿಂಹ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಜಂಟಿ ಮಾಧ್ಯಮ ಸಂವಾದ ನಡೆಸಿ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷದ ಕಟಿಬದ್ಧ ಸೈನಿಕ. ಎಂದಿಗೂ ಪಕ್ಷಕ್ಕೆ ದ್ರೋಹ ಮಾಡುವ ಮಾತೇ ಬರುವುದಿಲ್ಲ ಎಂದರು.

ಮಹಾರಾಜರಾಗಿ ಯದುವೀರ್‌ ನಾಡಿಗೆ ಪರಿಚಿತರಾದವರು. ಬಿಜೆಪಿ ಅಭ್ಯರ್ಥಿಯಾಗಿ ಜನಕ್ಕೆ ಪರಿಚಿತರಾಗಬೇಕು. ಅವರ ಚಿಂತನೆ, ಆಲೋಚನೆ, ಈ ಕ್ಷೇತ್ರದ ಬಗ್ಗೆ ಇಟ್ಟುಕೊಂಡಿರುವ ಕನಸಿನ ಬಗ್ಗೆ ಜನರಿಗೆ ತಿಳಿಸಬೇಕಿದೆ ಮತ್ತು ಜನರ ಆಶಿರ್ವಾದವನ್ನು ಪಡೆಯಬೇಕಿದೆ ಎಂದು ತಿಳಿಸಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿ ದೊಡ್ಡದಾಗಿದೆ. ಹೀಗಾಗಿ ಸುಲಭಕ್ಕೆ ಮತದಾರರನ್ನುತಲುಪುವ ಏಕ ಮಾತ್ರ ಮಾರ್ಗ ಎಂದರೆ ಮಾಧ್ಯಮ ಹೀಗಾಗಿ ಮಾಧ್ಯಮದವರ ಸಹಕಾರ ತುಂಬಾ ಮುಖ್ಯವಾಗಿದೆ ಎಂದರು.

ನಮ್ಮ ಮಧ್ಯೆ ಯಾವುದೇ ಒಡಕು ಮೂಡಿಲ್ಲ: ಲೋಕಸಭಾ ಚುನಾವಣೆಗೆ ಪಕ್ಷ ಎದುವೀರ್‌ ಅವರನ್ನು ಆಯ್ಕೆ ಮಾಡಿದ ಕೂಡಲೆ ಅವರಿಗೆ ನಾನೇ ಕರೆ ಮಾಡಿ ನನ್ನ ಸಹಕರ ಹಾಗೂ ಬೆಂಬಲವನ್ನು ತಿಳಿಸಿದ್ದೇನೆ. ಹೀಗಾಗಿ ನಮ್ಮ ಮಧ್ಯೆ ಯಾವುದೇ ಬಿರುಕಾಗಲಿ, ಬೇಸರವಾಗಲಿ ಇಲ್ಲ ಎಂದು ಪ್ರತಾಪ್‌ ಸಿಂಹ, ಮಾಧ್ಯಮಗಳ ಪ್ರಶ್ನೆಗೆ ಉತ್ತರ ನೀಡಿದರು.

ಶಾಸಕ ಶ್ರೀವತ್ಸ, ಮೈಸೂರು-ಕೊಡಗು ಬಿಜೆಪಿ ಲೋಕಸಭಾ ಅಭ್ಯರ್ಥಿ ಯದುವೀರ್‌, ಮಾಜಿ ಶಾಸಕ, ಬಿಜೆಪಿ ನಗರಾಧ್ಯಕ್ಷ ಎಲ್‌.ನಾಗೇಂದ್ರ, ಮಾಜಿ ಶಾಸಕ ಎಸ್‌.ಎ.ರಾಮದಾಸ್‌, ಬಿಜೆಪಿ ವಕ್ತಾರೆ ಮಾಳ್ವಿಕ ಅವಿನಾಶ್‌ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು.

andolanait

Recent Posts

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

58 mins ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

2 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

2 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

4 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

4 hours ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

4 hours ago