ಮೈಸೂರು

ಪಕ್ಷಕ್ಕೂ ದ್ರೋಹ ಮಾಡುವುದಿಲ್ಲ ಪಕ್ಕದವರಿಗೂ ದ್ರೋಹ ಮಾಡುವುದಿಲ್ಲ : ಪ್ರತಾಪ್‌ ಸಿಂಹ

ಮೈಸೂರು : ಬಿಜೆಪಿ ಪಕ್ಷ  ನನ್ನ ತಾಯಿ ಇದ್ದಂತ್ತೆ. ಯಾವುದೇ ಕಾರಣಕ್ಕೂ ಪಕ್ಷಕ್ಕಾಗಲಿ ಪಕ್ಕದವರಿಗಾಗಲಿ ದ್ರೋಹ ಮಾಡುವ ಮಾತೇ ಇಲ್ಲ ಎಂದು ಸಂಸದ ಪ್ರತಾಪ್‌ ಸಿಂಹ ತಿಳಿಸಿದರು.

ಸಂಸದ್‌ ಪ್ರತಾಪ್‌ ಸಿಂಹ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಜಂಟಿ ಮಾಧ್ಯಮ ಸಂವಾದ ನಡೆಸಿ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷದ ಕಟಿಬದ್ಧ ಸೈನಿಕ. ಎಂದಿಗೂ ಪಕ್ಷಕ್ಕೆ ದ್ರೋಹ ಮಾಡುವ ಮಾತೇ ಬರುವುದಿಲ್ಲ ಎಂದರು.

ಮಹಾರಾಜರಾಗಿ ಯದುವೀರ್‌ ನಾಡಿಗೆ ಪರಿಚಿತರಾದವರು. ಬಿಜೆಪಿ ಅಭ್ಯರ್ಥಿಯಾಗಿ ಜನಕ್ಕೆ ಪರಿಚಿತರಾಗಬೇಕು. ಅವರ ಚಿಂತನೆ, ಆಲೋಚನೆ, ಈ ಕ್ಷೇತ್ರದ ಬಗ್ಗೆ ಇಟ್ಟುಕೊಂಡಿರುವ ಕನಸಿನ ಬಗ್ಗೆ ಜನರಿಗೆ ತಿಳಿಸಬೇಕಿದೆ ಮತ್ತು ಜನರ ಆಶಿರ್ವಾದವನ್ನು ಪಡೆಯಬೇಕಿದೆ ಎಂದು ತಿಳಿಸಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿ ದೊಡ್ಡದಾಗಿದೆ. ಹೀಗಾಗಿ ಸುಲಭಕ್ಕೆ ಮತದಾರರನ್ನುತಲುಪುವ ಏಕ ಮಾತ್ರ ಮಾರ್ಗ ಎಂದರೆ ಮಾಧ್ಯಮ ಹೀಗಾಗಿ ಮಾಧ್ಯಮದವರ ಸಹಕಾರ ತುಂಬಾ ಮುಖ್ಯವಾಗಿದೆ ಎಂದರು.

ನಮ್ಮ ಮಧ್ಯೆ ಯಾವುದೇ ಒಡಕು ಮೂಡಿಲ್ಲ: ಲೋಕಸಭಾ ಚುನಾವಣೆಗೆ ಪಕ್ಷ ಎದುವೀರ್‌ ಅವರನ್ನು ಆಯ್ಕೆ ಮಾಡಿದ ಕೂಡಲೆ ಅವರಿಗೆ ನಾನೇ ಕರೆ ಮಾಡಿ ನನ್ನ ಸಹಕರ ಹಾಗೂ ಬೆಂಬಲವನ್ನು ತಿಳಿಸಿದ್ದೇನೆ. ಹೀಗಾಗಿ ನಮ್ಮ ಮಧ್ಯೆ ಯಾವುದೇ ಬಿರುಕಾಗಲಿ, ಬೇಸರವಾಗಲಿ ಇಲ್ಲ ಎಂದು ಪ್ರತಾಪ್‌ ಸಿಂಹ, ಮಾಧ್ಯಮಗಳ ಪ್ರಶ್ನೆಗೆ ಉತ್ತರ ನೀಡಿದರು.

ಶಾಸಕ ಶ್ರೀವತ್ಸ, ಮೈಸೂರು-ಕೊಡಗು ಬಿಜೆಪಿ ಲೋಕಸಭಾ ಅಭ್ಯರ್ಥಿ ಯದುವೀರ್‌, ಮಾಜಿ ಶಾಸಕ, ಬಿಜೆಪಿ ನಗರಾಧ್ಯಕ್ಷ ಎಲ್‌.ನಾಗೇಂದ್ರ, ಮಾಜಿ ಶಾಸಕ ಎಸ್‌.ಎ.ರಾಮದಾಸ್‌, ಬಿಜೆಪಿ ವಕ್ತಾರೆ ಮಾಳ್ವಿಕ ಅವಿನಾಶ್‌ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು.

andolanait

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

7 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

11 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

11 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

12 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

12 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

14 hours ago