ಮೈಸೂರು

ಪಕ್ಷಕ್ಕೂ ದ್ರೋಹ ಮಾಡುವುದಿಲ್ಲ ಪಕ್ಕದವರಿಗೂ ದ್ರೋಹ ಮಾಡುವುದಿಲ್ಲ : ಪ್ರತಾಪ್‌ ಸಿಂಹ

ಮೈಸೂರು : ಬಿಜೆಪಿ ಪಕ್ಷ  ನನ್ನ ತಾಯಿ ಇದ್ದಂತ್ತೆ. ಯಾವುದೇ ಕಾರಣಕ್ಕೂ ಪಕ್ಷಕ್ಕಾಗಲಿ ಪಕ್ಕದವರಿಗಾಗಲಿ ದ್ರೋಹ ಮಾಡುವ ಮಾತೇ ಇಲ್ಲ ಎಂದು ಸಂಸದ ಪ್ರತಾಪ್‌ ಸಿಂಹ ತಿಳಿಸಿದರು.

ಸಂಸದ್‌ ಪ್ರತಾಪ್‌ ಸಿಂಹ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಜಂಟಿ ಮಾಧ್ಯಮ ಸಂವಾದ ನಡೆಸಿ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷದ ಕಟಿಬದ್ಧ ಸೈನಿಕ. ಎಂದಿಗೂ ಪಕ್ಷಕ್ಕೆ ದ್ರೋಹ ಮಾಡುವ ಮಾತೇ ಬರುವುದಿಲ್ಲ ಎಂದರು.

ಮಹಾರಾಜರಾಗಿ ಯದುವೀರ್‌ ನಾಡಿಗೆ ಪರಿಚಿತರಾದವರು. ಬಿಜೆಪಿ ಅಭ್ಯರ್ಥಿಯಾಗಿ ಜನಕ್ಕೆ ಪರಿಚಿತರಾಗಬೇಕು. ಅವರ ಚಿಂತನೆ, ಆಲೋಚನೆ, ಈ ಕ್ಷೇತ್ರದ ಬಗ್ಗೆ ಇಟ್ಟುಕೊಂಡಿರುವ ಕನಸಿನ ಬಗ್ಗೆ ಜನರಿಗೆ ತಿಳಿಸಬೇಕಿದೆ ಮತ್ತು ಜನರ ಆಶಿರ್ವಾದವನ್ನು ಪಡೆಯಬೇಕಿದೆ ಎಂದು ತಿಳಿಸಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿ ದೊಡ್ಡದಾಗಿದೆ. ಹೀಗಾಗಿ ಸುಲಭಕ್ಕೆ ಮತದಾರರನ್ನುತಲುಪುವ ಏಕ ಮಾತ್ರ ಮಾರ್ಗ ಎಂದರೆ ಮಾಧ್ಯಮ ಹೀಗಾಗಿ ಮಾಧ್ಯಮದವರ ಸಹಕಾರ ತುಂಬಾ ಮುಖ್ಯವಾಗಿದೆ ಎಂದರು.

ನಮ್ಮ ಮಧ್ಯೆ ಯಾವುದೇ ಒಡಕು ಮೂಡಿಲ್ಲ: ಲೋಕಸಭಾ ಚುನಾವಣೆಗೆ ಪಕ್ಷ ಎದುವೀರ್‌ ಅವರನ್ನು ಆಯ್ಕೆ ಮಾಡಿದ ಕೂಡಲೆ ಅವರಿಗೆ ನಾನೇ ಕರೆ ಮಾಡಿ ನನ್ನ ಸಹಕರ ಹಾಗೂ ಬೆಂಬಲವನ್ನು ತಿಳಿಸಿದ್ದೇನೆ. ಹೀಗಾಗಿ ನಮ್ಮ ಮಧ್ಯೆ ಯಾವುದೇ ಬಿರುಕಾಗಲಿ, ಬೇಸರವಾಗಲಿ ಇಲ್ಲ ಎಂದು ಪ್ರತಾಪ್‌ ಸಿಂಹ, ಮಾಧ್ಯಮಗಳ ಪ್ರಶ್ನೆಗೆ ಉತ್ತರ ನೀಡಿದರು.

ಶಾಸಕ ಶ್ರೀವತ್ಸ, ಮೈಸೂರು-ಕೊಡಗು ಬಿಜೆಪಿ ಲೋಕಸಭಾ ಅಭ್ಯರ್ಥಿ ಯದುವೀರ್‌, ಮಾಜಿ ಶಾಸಕ, ಬಿಜೆಪಿ ನಗರಾಧ್ಯಕ್ಷ ಎಲ್‌.ನಾಗೇಂದ್ರ, ಮಾಜಿ ಶಾಸಕ ಎಸ್‌.ಎ.ರಾಮದಾಸ್‌, ಬಿಜೆಪಿ ವಕ್ತಾರೆ ಮಾಳ್ವಿಕ ಅವಿನಾಶ್‌ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು.

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

11 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

11 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

13 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

13 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

13 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

14 hours ago