ಮೈಸೂರು

ಮೈಸೂರು: ಹಣದಾಸೆಗೆ ಪರಿಚಿತ ವೃದ್ಧೆಯನ್ನೇ ಕೊಂದ ಮಹಿಳೆ

ಮೈಸೂರು: ಹಣದಾಸೆಗೆ ಪರಿಚಿತ ಸ್ನೇಹಿತಯನ್ನೇ ಹತ್ಯೆಗೈದ ಘಟನೆ ಮೈಸೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ವೃದ್ಧೆಯ ಬಳಿಯಿರುವ ಹಣಕ್ಕೆ ಮತ್ತು ಚಿನ್ನಕ್ಕೆ ಆಸೆ ಪಟ್ಟು ವೃದ್ದೇಯನ್ನು ಉಸಿರು ಗಟ್ಟಿಸಿ ಕೊಲೆ ಮಾಡಲಾಗಿದೆ.

ಈ ಘಟನೆ ಮೈಸೂರಿನ ಕೆ.ಸಿ. ಬಡಾವಣೆಯಲ್ಲಿ ನಡೆದಿದ್ದು, 62 ವರ್ಷದ ಸುಲೋಚನ ಮೃತ ವೃದ್ದೆಯಾಗಿದ್ದಾರೆ. ಜೆಸಿ ನಗರದ ನಿವಾಸಿಯಾಗಿರುವ 45 ವರ್ಷದ ಶಕುಂತಲ ಹತ್ಯೆ ಮಾಡಿರುವ ಆರೋಪಿಯಾಗಿದ್ದಾಳೆ. ಮಾರ್ಚ್.5 ರಂದು, ಸುಮಾರಿಗೆ ಸಂಜೆ 7 ಗಂಟೆಗೆ ಶಕುಂತಲಾ ಎಂಬಾಕೆ ಸುಲೋಚನಾಗೆ ಕರೆ ಮಾಡಿ, ತನ್ನ ಮನೆಗೆ ಭೇಟಿ ನೀಡುವಂತೆ ವಿನಂತಿಸಿದಳು. ಬಳಿಕ ಸುಲೋಚನಾ ಅವರು ಮನೆಗೆ ಬರುತ್ತಿದ್ದಂತೆ ಹಾಸಿಗೆಯ ಮೇಲೆ ಅವರನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಂದು ಚಿನ್ನದ ಸರ ತೆಗೆದು ಸುಮಾರು ರಾತ್ರಿ 9.30 ಗಂಟೆಗೆ ಟೆರೇಷಿಯನ್ ಕಾಲೇಜು ವೃತ್ತದ ಬಳಿ ಇರುವ ದುರ್ಗಾ ಜ್ಯುವೆಲರ್ಸ್‌ನಲ್ಲಿ ಅಡವಿಟ್ಟು 1.50 ಲಕ್ಷ ರೂ. ಪಡೆದಿದ್ದಾರೆ.

ನಂತರ ತನ್ನ ಬಾಡಿಗೆ ಮನೆ ಮಾಲೀಕನ ಮನೆಗೆ ತೆರಳಿ ಬಾಡಿಗೆ ಬಾಕಿರುವ 36,000 ರೂ.ಗಳನ್ನು ಹಿಂದಿರುಗಿಸಿದ್ದಾರೆ. ಅಲ್ಲದೇ ಸುಲೋಚನಾಳ ಶವವನ್ನೂ ತನ್ನ ಮನೆಯಲ್ಲಿಯೇ ಇಟ್ಟು, ಆಕೆಯ ಮಗ ರವಿಚಂದ್ರನಿಗೆ ಕರೆ ಮಾಡಿ, ತಮ್ಮ ತಾಯಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಜೊತೆಗೆ ಅವರೊಂದಿಗೆ ಮಾತನಾಡುವಾಗ ಅವರು ಬೆವರುತ್ತಿದ್ದರು ಎಂದಿದ್ದಾರೆ.

ಈ ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಮೃತರ ಮಗ ರವಿಚಂದ್ರ ಬಂದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆ ವೇಳೆ ಖಾಸಗಿ ಆಸ್ಪತ್ರೆಯ ವೈದ್ಯರು ಇದು ಸಹಜ ಸಾವಲ್ಲ ಎಂಬುದನ್ನು ದೃಢ ಪಡಿಸಿದ್ದಾರೆ. ಈ ವಿಚಾರ ತಿಳಿದ ಮಗ ರವಿಚಂದ್ರ ನಗರದ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ವಿಚಾರಣೆ ಮಾಡಿದಾಗ ಶಕುಂತಲಾನೇ ತಾನು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

9 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

9 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

9 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

9 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

9 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

9 hours ago