ಮೈಸೂರು

ಮೈಸೂರು: ಹಣದಾಸೆಗೆ ಪರಿಚಿತ ವೃದ್ಧೆಯನ್ನೇ ಕೊಂದ ಮಹಿಳೆ

ಮೈಸೂರು: ಹಣದಾಸೆಗೆ ಪರಿಚಿತ ಸ್ನೇಹಿತಯನ್ನೇ ಹತ್ಯೆಗೈದ ಘಟನೆ ಮೈಸೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ವೃದ್ಧೆಯ ಬಳಿಯಿರುವ ಹಣಕ್ಕೆ ಮತ್ತು ಚಿನ್ನಕ್ಕೆ ಆಸೆ ಪಟ್ಟು ವೃದ್ದೇಯನ್ನು ಉಸಿರು ಗಟ್ಟಿಸಿ ಕೊಲೆ ಮಾಡಲಾಗಿದೆ.

ಈ ಘಟನೆ ಮೈಸೂರಿನ ಕೆ.ಸಿ. ಬಡಾವಣೆಯಲ್ಲಿ ನಡೆದಿದ್ದು, 62 ವರ್ಷದ ಸುಲೋಚನ ಮೃತ ವೃದ್ದೆಯಾಗಿದ್ದಾರೆ. ಜೆಸಿ ನಗರದ ನಿವಾಸಿಯಾಗಿರುವ 45 ವರ್ಷದ ಶಕುಂತಲ ಹತ್ಯೆ ಮಾಡಿರುವ ಆರೋಪಿಯಾಗಿದ್ದಾಳೆ. ಮಾರ್ಚ್.5 ರಂದು, ಸುಮಾರಿಗೆ ಸಂಜೆ 7 ಗಂಟೆಗೆ ಶಕುಂತಲಾ ಎಂಬಾಕೆ ಸುಲೋಚನಾಗೆ ಕರೆ ಮಾಡಿ, ತನ್ನ ಮನೆಗೆ ಭೇಟಿ ನೀಡುವಂತೆ ವಿನಂತಿಸಿದಳು. ಬಳಿಕ ಸುಲೋಚನಾ ಅವರು ಮನೆಗೆ ಬರುತ್ತಿದ್ದಂತೆ ಹಾಸಿಗೆಯ ಮೇಲೆ ಅವರನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಂದು ಚಿನ್ನದ ಸರ ತೆಗೆದು ಸುಮಾರು ರಾತ್ರಿ 9.30 ಗಂಟೆಗೆ ಟೆರೇಷಿಯನ್ ಕಾಲೇಜು ವೃತ್ತದ ಬಳಿ ಇರುವ ದುರ್ಗಾ ಜ್ಯುವೆಲರ್ಸ್‌ನಲ್ಲಿ ಅಡವಿಟ್ಟು 1.50 ಲಕ್ಷ ರೂ. ಪಡೆದಿದ್ದಾರೆ.

ನಂತರ ತನ್ನ ಬಾಡಿಗೆ ಮನೆ ಮಾಲೀಕನ ಮನೆಗೆ ತೆರಳಿ ಬಾಡಿಗೆ ಬಾಕಿರುವ 36,000 ರೂ.ಗಳನ್ನು ಹಿಂದಿರುಗಿಸಿದ್ದಾರೆ. ಅಲ್ಲದೇ ಸುಲೋಚನಾಳ ಶವವನ್ನೂ ತನ್ನ ಮನೆಯಲ್ಲಿಯೇ ಇಟ್ಟು, ಆಕೆಯ ಮಗ ರವಿಚಂದ್ರನಿಗೆ ಕರೆ ಮಾಡಿ, ತಮ್ಮ ತಾಯಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಜೊತೆಗೆ ಅವರೊಂದಿಗೆ ಮಾತನಾಡುವಾಗ ಅವರು ಬೆವರುತ್ತಿದ್ದರು ಎಂದಿದ್ದಾರೆ.

ಈ ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಮೃತರ ಮಗ ರವಿಚಂದ್ರ ಬಂದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆ ವೇಳೆ ಖಾಸಗಿ ಆಸ್ಪತ್ರೆಯ ವೈದ್ಯರು ಇದು ಸಹಜ ಸಾವಲ್ಲ ಎಂಬುದನ್ನು ದೃಢ ಪಡಿಸಿದ್ದಾರೆ. ಈ ವಿಚಾರ ತಿಳಿದ ಮಗ ರವಿಚಂದ್ರ ನಗರದ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ವಿಚಾರಣೆ ಮಾಡಿದಾಗ ಶಕುಂತಲಾನೇ ತಾನು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

9 mins ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

2 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

2 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

2 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

3 hours ago

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

4 hours ago