ಮೈಸೂರು

ಮೈಸೂರು: ಹಣದಾಸೆಗೆ ಪರಿಚಿತ ವೃದ್ಧೆಯನ್ನೇ ಕೊಂದ ಮಹಿಳೆ

ಮೈಸೂರು: ಹಣದಾಸೆಗೆ ಪರಿಚಿತ ಸ್ನೇಹಿತಯನ್ನೇ ಹತ್ಯೆಗೈದ ಘಟನೆ ಮೈಸೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ವೃದ್ಧೆಯ ಬಳಿಯಿರುವ ಹಣಕ್ಕೆ ಮತ್ತು ಚಿನ್ನಕ್ಕೆ ಆಸೆ ಪಟ್ಟು ವೃದ್ದೇಯನ್ನು ಉಸಿರು ಗಟ್ಟಿಸಿ ಕೊಲೆ ಮಾಡಲಾಗಿದೆ.

ಈ ಘಟನೆ ಮೈಸೂರಿನ ಕೆ.ಸಿ. ಬಡಾವಣೆಯಲ್ಲಿ ನಡೆದಿದ್ದು, 62 ವರ್ಷದ ಸುಲೋಚನ ಮೃತ ವೃದ್ದೆಯಾಗಿದ್ದಾರೆ. ಜೆಸಿ ನಗರದ ನಿವಾಸಿಯಾಗಿರುವ 45 ವರ್ಷದ ಶಕುಂತಲ ಹತ್ಯೆ ಮಾಡಿರುವ ಆರೋಪಿಯಾಗಿದ್ದಾಳೆ. ಮಾರ್ಚ್.5 ರಂದು, ಸುಮಾರಿಗೆ ಸಂಜೆ 7 ಗಂಟೆಗೆ ಶಕುಂತಲಾ ಎಂಬಾಕೆ ಸುಲೋಚನಾಗೆ ಕರೆ ಮಾಡಿ, ತನ್ನ ಮನೆಗೆ ಭೇಟಿ ನೀಡುವಂತೆ ವಿನಂತಿಸಿದಳು. ಬಳಿಕ ಸುಲೋಚನಾ ಅವರು ಮನೆಗೆ ಬರುತ್ತಿದ್ದಂತೆ ಹಾಸಿಗೆಯ ಮೇಲೆ ಅವರನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಂದು ಚಿನ್ನದ ಸರ ತೆಗೆದು ಸುಮಾರು ರಾತ್ರಿ 9.30 ಗಂಟೆಗೆ ಟೆರೇಷಿಯನ್ ಕಾಲೇಜು ವೃತ್ತದ ಬಳಿ ಇರುವ ದುರ್ಗಾ ಜ್ಯುವೆಲರ್ಸ್‌ನಲ್ಲಿ ಅಡವಿಟ್ಟು 1.50 ಲಕ್ಷ ರೂ. ಪಡೆದಿದ್ದಾರೆ.

ನಂತರ ತನ್ನ ಬಾಡಿಗೆ ಮನೆ ಮಾಲೀಕನ ಮನೆಗೆ ತೆರಳಿ ಬಾಡಿಗೆ ಬಾಕಿರುವ 36,000 ರೂ.ಗಳನ್ನು ಹಿಂದಿರುಗಿಸಿದ್ದಾರೆ. ಅಲ್ಲದೇ ಸುಲೋಚನಾಳ ಶವವನ್ನೂ ತನ್ನ ಮನೆಯಲ್ಲಿಯೇ ಇಟ್ಟು, ಆಕೆಯ ಮಗ ರವಿಚಂದ್ರನಿಗೆ ಕರೆ ಮಾಡಿ, ತಮ್ಮ ತಾಯಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಜೊತೆಗೆ ಅವರೊಂದಿಗೆ ಮಾತನಾಡುವಾಗ ಅವರು ಬೆವರುತ್ತಿದ್ದರು ಎಂದಿದ್ದಾರೆ.

ಈ ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಮೃತರ ಮಗ ರವಿಚಂದ್ರ ಬಂದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆ ವೇಳೆ ಖಾಸಗಿ ಆಸ್ಪತ್ರೆಯ ವೈದ್ಯರು ಇದು ಸಹಜ ಸಾವಲ್ಲ ಎಂಬುದನ್ನು ದೃಢ ಪಡಿಸಿದ್ದಾರೆ. ಈ ವಿಚಾರ ತಿಳಿದ ಮಗ ರವಿಚಂದ್ರ ನಗರದ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ವಿಚಾರಣೆ ಮಾಡಿದಾಗ ಶಕುಂತಲಾನೇ ತಾನು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಬಹುನಿರೀಕ್ಷಿತ ಮಾರ್ಕ್‌ ಹಾಗೂ 45 ಸಿನಿಮಾ ಬಿಡುಗಡೆ

ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್‌ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌,…

3 mins ago

ಕಾಡಾನೆಗಳು ಊರಿಗೆ ಬರದಂತೆ ಎಐ ಆಧಾರಿತ ಕ್ಯಾಮರಾ ಅಳವಡಿಕೆ

ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…

41 mins ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…

2 hours ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಹಾಸನ ಮೂಲದ ಇಬ್ಬರು ಟೆಕ್ಕಿಗಳು ಕಣ್ಮರೆ

ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…

2 hours ago

ಚಿತ್ರದುರ್ಗದಲ್ಲಿ ಬಸ್‌ ದುರಂತ ಪ್ರಕರಣ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್‌ ಹಾಗೂ ಖಾಸಗಿ ಬಸ್‌ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…

2 hours ago

ಎಲ್ಲೆಡೆ ಕ್ರಿಸ್‌ಮಸ್ ಹಬ್ಬದ ಸಂಭ್ರಮ: ಗಣ್ಯರಿಂದ ಶುಭಾಶಯಗಳ ಮಹಾಪೂರ

ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್‌ಮಸ್‌ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್‌ಮಸ್‌ ಹಬ್ಬವು ನಂಬಿಕೆಯೆಂಬ…

2 hours ago