ಮೈಸೂರು

ಮೈಸೂರು: ಹಣದಾಸೆಗೆ ಪರಿಚಿತ ವೃದ್ಧೆಯನ್ನೇ ಕೊಂದ ಮಹಿಳೆ

ಮೈಸೂರು: ಹಣದಾಸೆಗೆ ಪರಿಚಿತ ಸ್ನೇಹಿತಯನ್ನೇ ಹತ್ಯೆಗೈದ ಘಟನೆ ಮೈಸೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ವೃದ್ಧೆಯ ಬಳಿಯಿರುವ ಹಣಕ್ಕೆ ಮತ್ತು ಚಿನ್ನಕ್ಕೆ ಆಸೆ ಪಟ್ಟು ವೃದ್ದೇಯನ್ನು ಉಸಿರು ಗಟ್ಟಿಸಿ ಕೊಲೆ ಮಾಡಲಾಗಿದೆ.

ಈ ಘಟನೆ ಮೈಸೂರಿನ ಕೆ.ಸಿ. ಬಡಾವಣೆಯಲ್ಲಿ ನಡೆದಿದ್ದು, 62 ವರ್ಷದ ಸುಲೋಚನ ಮೃತ ವೃದ್ದೆಯಾಗಿದ್ದಾರೆ. ಜೆಸಿ ನಗರದ ನಿವಾಸಿಯಾಗಿರುವ 45 ವರ್ಷದ ಶಕುಂತಲ ಹತ್ಯೆ ಮಾಡಿರುವ ಆರೋಪಿಯಾಗಿದ್ದಾಳೆ. ಮಾರ್ಚ್.5 ರಂದು, ಸುಮಾರಿಗೆ ಸಂಜೆ 7 ಗಂಟೆಗೆ ಶಕುಂತಲಾ ಎಂಬಾಕೆ ಸುಲೋಚನಾಗೆ ಕರೆ ಮಾಡಿ, ತನ್ನ ಮನೆಗೆ ಭೇಟಿ ನೀಡುವಂತೆ ವಿನಂತಿಸಿದಳು. ಬಳಿಕ ಸುಲೋಚನಾ ಅವರು ಮನೆಗೆ ಬರುತ್ತಿದ್ದಂತೆ ಹಾಸಿಗೆಯ ಮೇಲೆ ಅವರನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಂದು ಚಿನ್ನದ ಸರ ತೆಗೆದು ಸುಮಾರು ರಾತ್ರಿ 9.30 ಗಂಟೆಗೆ ಟೆರೇಷಿಯನ್ ಕಾಲೇಜು ವೃತ್ತದ ಬಳಿ ಇರುವ ದುರ್ಗಾ ಜ್ಯುವೆಲರ್ಸ್‌ನಲ್ಲಿ ಅಡವಿಟ್ಟು 1.50 ಲಕ್ಷ ರೂ. ಪಡೆದಿದ್ದಾರೆ.

ನಂತರ ತನ್ನ ಬಾಡಿಗೆ ಮನೆ ಮಾಲೀಕನ ಮನೆಗೆ ತೆರಳಿ ಬಾಡಿಗೆ ಬಾಕಿರುವ 36,000 ರೂ.ಗಳನ್ನು ಹಿಂದಿರುಗಿಸಿದ್ದಾರೆ. ಅಲ್ಲದೇ ಸುಲೋಚನಾಳ ಶವವನ್ನೂ ತನ್ನ ಮನೆಯಲ್ಲಿಯೇ ಇಟ್ಟು, ಆಕೆಯ ಮಗ ರವಿಚಂದ್ರನಿಗೆ ಕರೆ ಮಾಡಿ, ತಮ್ಮ ತಾಯಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಜೊತೆಗೆ ಅವರೊಂದಿಗೆ ಮಾತನಾಡುವಾಗ ಅವರು ಬೆವರುತ್ತಿದ್ದರು ಎಂದಿದ್ದಾರೆ.

ಈ ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಮೃತರ ಮಗ ರವಿಚಂದ್ರ ಬಂದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆ ವೇಳೆ ಖಾಸಗಿ ಆಸ್ಪತ್ರೆಯ ವೈದ್ಯರು ಇದು ಸಹಜ ಸಾವಲ್ಲ ಎಂಬುದನ್ನು ದೃಢ ಪಡಿಸಿದ್ದಾರೆ. ಈ ವಿಚಾರ ತಿಳಿದ ಮಗ ರವಿಚಂದ್ರ ನಗರದ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ವಿಚಾರಣೆ ಮಾಡಿದಾಗ ಶಕುಂತಲಾನೇ ತಾನು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

4 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

17 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

19 hours ago