ಮೈಸೂರು

ಮಹಿಳೆಯರ ಮೇಲೆ ಮಚ್ಚಿನಿಂದ ಹಲ್ಲೆ

ಮೈಸೂರು : ಕಾರಿನಲ್ಲಿ ಬಂದ ಮೂವರ ಗುಂಪೊಂದು ನಡುರಸ್ತೆಯಲ್ಲಿಯೇ ಆಟೋವನ್ನು ತಡೆದು ಅದರಲ್ಲಿದ್ದ ಮಹಿಳೆಯರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿರುವ ಘಟನೆ ನಗರದ ರಾಮಾಜುನ ರಸ್ತೆಯಲ್ಲಿ ನಡೆದಿದೆ.

ಗುರುವಾರ ರಾತ್ರಿ 9 ಗಂಟೆ ವೇಳೆಯಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದವರು ಯಾರು, ಹಲ್ಲೆ ನಡೆಸಿರುವವರು ಯಾರು ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಶುಕ್ರವಾರ ರಾತ್ರಿ 8:45 ರಿಂದ 9 ಗಂಟೆ ನಡುವೆ ಕಪ್ಪು ಕಾರಿನಲ್ಲಿ ಮೂವರ ಯುವಕರ ಗುಂಪು ಬಂದಿದೆ. ರಾಮಾನುಜ ರಸ್ತೆಯ 12ನೇ ತಿರುವಿನ ಬಳಿ ರಸ್ತೆಯಲ್ಲಿ ಬರುತಿದ್ದ ಆಟೋಗೆ ಕಾರನ್ನು ಅಡ್ಡಲಾಗಿ ನಿಲ್ಲಿಸಿದ್ದಾರೆ. ಆನಂತರ ಕಾರಿನಿಂದ ಇಳಿದ ಮೂವರು ವ್ಯಕ್ತಿಗಳು ಮಾರಾಕಾಸ್ತ್ರಗಳನ್ನು ಹಿಡಿದು ಆಟೋ ಒಳಗಿದ್ದ ಮಹಿಳೆಯರ ಮೇಲೆ ಮಚ್ಚುಗಳಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ಆಟೋದಲ್ಲಿದ್ದವರನ್ನು ಅವಾಚ್ಯವಾಗಿ ನಿಂದಿಸುತ್ತಾ, ನಿಮ್ಮನ್ನು ಕತ್ತರಿಸದೇ ಬಿಡುವುದಿಲ್ಲ ಎಂದು ಕೂಗುತ್ತಾ ಕಾರನ್ನು ಏರಿ ಸ್ಥಳದಿಂದ ಪರಾರಿಯಾಗಿದ್ದಾರೆ.

ನೂರಾರು ಜನರು ಹಾಗೂ ವಾಹನಗಳು ಓಡಾಡುವ ರಾಮಾನುಜ ರಸ್ತೆಯಂತ ಪ್ರಮುಖ ಸ್ಥಳದಲ್ಲಿ ಈ ಘಟನೆ ನಡೆದಿರುವುದರಿಂದ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಸ್ಥಳದಲ್ಲಿದ್ದ ಐವತ್ತಕ್ಕು ಹೆಚ್ಚು ಮಂದಿ ಸಾರ್ವಜನಿಕರು ಅಸಹಾಯಕರಾಗಿ ಘಟನೆಯನ್ನು ನೋಡುತ್ತಾ ನಿಂತಿದುದು ಕಂಡು ಬಂದಿದೆ. ಸಾರ್ವಜನಿಕರು ಕೆ.ಆರ್‌ ಪೊಲೀಸ್‌ ಠಾಣೆಯ ಅಧಿಕಾರಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಕೆ.ಆರ್‌ ಠಾಣಾ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಘಟನೆಗೆ ಕಾರಣರಾದವರ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಗಾಯಗೊಂಡವರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ ಎನ್ನಲಾಗಿದೆ. ಆದರೆ ಯಾವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬುದು ಪೊಲಿಸರಿಗೆ ಗೊತ್ತಾಗಿಲ್ಲ. ಈ ಸಂಬಂಧ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸುತ್ತಿರುವ ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

ಕೌಟುಂಬಿಕ ಕಲಹ,,,?
ಪೊಲೀಸರು ಹೇಳುವಂತೆ ಘಟನೆಯು ಕೌಟುಂಬಿಕ ಕಲಹವಾಗಿದೆ. ನಗರದ ಚಾಮರಾಜ ಮೊಹಲ್ಲಾ ನಿವಾಸಿ ಯುವತಿಯು ಕೆಲ ದಿನಗಳ‌ ಹಿಂದೆ ತಾನು ಪ್ರೀತಿಸಿದ ಯುವಕನೊಂದಿಗೆ ಮನೆಬಿಟ್ಟು ತೆರಳಿದ್ದಳು ಎನ್ನಲಾಗಿದೆ. ಆಕೆ‌ ಗುರುವಾದ ರಾತ್ರಿ‌ ಆಟೋ ಮೂಲಕ ಬರುವ ವಿಚಾರ ತಿಳಿದ ಸಂಬಂದಿಗಳು ಕಾರಿನಲ್ಲಿ ಬಂದು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಯದುವೀರ್‌ ಆಗ್ರಹ

ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…

10 mins ago

ಗೃಹ ಬಳಕೆ, ಕೈಗಾರಿಕೆಗೆ ದಿನದ 24 ಗಂಟೆಯೂ ವಿದ್ಯುತ್

ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…

14 mins ago

ಬೆಳಗಾವಿ ಅಧಿವೇಶನದಲ್ಲೂ ನಟ ದರ್ಶನ್‌ ಬಗ್ಗೆ ಚರ್ಚೆ : ಏನದು?

ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…

16 mins ago

ದಿ ಡೆವಿಲ್‌ ಚಿತ್ರದ ವಿಮರ್ಶೆ ಹಂಚಿಕೊಂಡ ಪತ್ನಿ ವಿಜಯಲಕ್ಷ್ಮಿ….!

ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…

24 mins ago

ಸರ್ಕಾರಿ ಶಾಲೆಗಳಿಗೆ ಗುಡ್‌ನ್ಯೂಸ್‌ : ಶಾಲಾ ಕೊಠಡಿ ದುರಸ್ಥಿಗೆ ರೂ.360 ಕೋಟಿ ಬಿಡುಗಡೆ

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…

37 mins ago

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…

43 mins ago