ಮೈಸೂರು : ಕಾರಿನಲ್ಲಿ ಬಂದ ಮೂವರ ಗುಂಪೊಂದು ನಡುರಸ್ತೆಯಲ್ಲಿಯೇ ಆಟೋವನ್ನು ತಡೆದು ಅದರಲ್ಲಿದ್ದ ಮಹಿಳೆಯರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿರುವ ಘಟನೆ ನಗರದ ರಾಮಾಜುನ ರಸ್ತೆಯಲ್ಲಿ ನಡೆದಿದೆ.
ಗುರುವಾರ ರಾತ್ರಿ 9 ಗಂಟೆ ವೇಳೆಯಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದವರು ಯಾರು, ಹಲ್ಲೆ ನಡೆಸಿರುವವರು ಯಾರು ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಶುಕ್ರವಾರ ರಾತ್ರಿ 8:45 ರಿಂದ 9 ಗಂಟೆ ನಡುವೆ ಕಪ್ಪು ಕಾರಿನಲ್ಲಿ ಮೂವರ ಯುವಕರ ಗುಂಪು ಬಂದಿದೆ. ರಾಮಾನುಜ ರಸ್ತೆಯ 12ನೇ ತಿರುವಿನ ಬಳಿ ರಸ್ತೆಯಲ್ಲಿ ಬರುತಿದ್ದ ಆಟೋಗೆ ಕಾರನ್ನು ಅಡ್ಡಲಾಗಿ ನಿಲ್ಲಿಸಿದ್ದಾರೆ. ಆನಂತರ ಕಾರಿನಿಂದ ಇಳಿದ ಮೂವರು ವ್ಯಕ್ತಿಗಳು ಮಾರಾಕಾಸ್ತ್ರಗಳನ್ನು ಹಿಡಿದು ಆಟೋ ಒಳಗಿದ್ದ ಮಹಿಳೆಯರ ಮೇಲೆ ಮಚ್ಚುಗಳಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ಆಟೋದಲ್ಲಿದ್ದವರನ್ನು ಅವಾಚ್ಯವಾಗಿ ನಿಂದಿಸುತ್ತಾ, ನಿಮ್ಮನ್ನು ಕತ್ತರಿಸದೇ ಬಿಡುವುದಿಲ್ಲ ಎಂದು ಕೂಗುತ್ತಾ ಕಾರನ್ನು ಏರಿ ಸ್ಥಳದಿಂದ ಪರಾರಿಯಾಗಿದ್ದಾರೆ.
ನೂರಾರು ಜನರು ಹಾಗೂ ವಾಹನಗಳು ಓಡಾಡುವ ರಾಮಾನುಜ ರಸ್ತೆಯಂತ ಪ್ರಮುಖ ಸ್ಥಳದಲ್ಲಿ ಈ ಘಟನೆ ನಡೆದಿರುವುದರಿಂದ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಸ್ಥಳದಲ್ಲಿದ್ದ ಐವತ್ತಕ್ಕು ಹೆಚ್ಚು ಮಂದಿ ಸಾರ್ವಜನಿಕರು ಅಸಹಾಯಕರಾಗಿ ಘಟನೆಯನ್ನು ನೋಡುತ್ತಾ ನಿಂತಿದುದು ಕಂಡು ಬಂದಿದೆ. ಸಾರ್ವಜನಿಕರು ಕೆ.ಆರ್ ಪೊಲೀಸ್ ಠಾಣೆಯ ಅಧಿಕಾರಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಕೆ.ಆರ್ ಠಾಣಾ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಘಟನೆಗೆ ಕಾರಣರಾದವರ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ ಎನ್ನಲಾಗಿದೆ. ಆದರೆ ಯಾವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬುದು ಪೊಲಿಸರಿಗೆ ಗೊತ್ತಾಗಿಲ್ಲ. ಈ ಸಂಬಂಧ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸುತ್ತಿರುವ ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
ಕೌಟುಂಬಿಕ ಕಲಹ,,,?
ಪೊಲೀಸರು ಹೇಳುವಂತೆ ಘಟನೆಯು ಕೌಟುಂಬಿಕ ಕಲಹವಾಗಿದೆ. ನಗರದ ಚಾಮರಾಜ ಮೊಹಲ್ಲಾ ನಿವಾಸಿ ಯುವತಿಯು ಕೆಲ ದಿನಗಳ ಹಿಂದೆ ತಾನು ಪ್ರೀತಿಸಿದ ಯುವಕನೊಂದಿಗೆ ಮನೆಬಿಟ್ಟು ತೆರಳಿದ್ದಳು ಎನ್ನಲಾಗಿದೆ. ಆಕೆ ಗುರುವಾದ ರಾತ್ರಿ ಆಟೋ ಮೂಲಕ ಬರುವ ವಿಚಾರ ತಿಳಿದ ಸಂಬಂದಿಗಳು ಕಾರಿನಲ್ಲಿ ಬಂದು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಪ್ರಕರಣ ರದ್ದು…
ಹಾಸನ: ಮನೆ ಸೀಜ್ ಮಾಡುವುದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರವಣಬೆಳಗೊಳ ಬಳಿಯ…
ರಾಮನಗರ: ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಗ್ರಾಮದ ಹೊರವಲಯದ…
ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ…
ಮೈಸೂರು: ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದುತ್ತಾ ರಜತ್ ಫೋಟೋಶೂಟ್ ಮಾಡಿಸಿದ್ದು, ಬಿಗ್ಬಾಸ್ ಹುಡುಗನ ಹುಚ್ಚಾಟಕ್ಕೆ ನೆಟ್ಟಿಗರು ತೀವ್ರ ಆಕ್ರೋಶ…
ಮೈಸೂರು: ಆದಾಯಕ್ಕಿಂತ ಹೆಚ್ಚು ಹಣ ಸಂಪಾದಿಸಿದ್ದಾರೆ ಎಂಬ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಏಳು ಕಡೆ ದಾಳಿ ನಡೆಸಿದ್ದಾರೆ.…