ಮೈಸೂರು : ಕಾರಿನಲ್ಲಿ ಬಂದ ಮೂವರ ಗುಂಪೊಂದು ನಡುರಸ್ತೆಯಲ್ಲಿಯೇ ಆಟೋವನ್ನು ತಡೆದು ಅದರಲ್ಲಿದ್ದ ಮಹಿಳೆಯರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿರುವ ಘಟನೆ ನಗರದ ರಾಮಾಜುನ ರಸ್ತೆಯಲ್ಲಿ ನಡೆದಿದೆ.
ಗುರುವಾರ ರಾತ್ರಿ 9 ಗಂಟೆ ವೇಳೆಯಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದವರು ಯಾರು, ಹಲ್ಲೆ ನಡೆಸಿರುವವರು ಯಾರು ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಶುಕ್ರವಾರ ರಾತ್ರಿ 8:45 ರಿಂದ 9 ಗಂಟೆ ನಡುವೆ ಕಪ್ಪು ಕಾರಿನಲ್ಲಿ ಮೂವರ ಯುವಕರ ಗುಂಪು ಬಂದಿದೆ. ರಾಮಾನುಜ ರಸ್ತೆಯ 12ನೇ ತಿರುವಿನ ಬಳಿ ರಸ್ತೆಯಲ್ಲಿ ಬರುತಿದ್ದ ಆಟೋಗೆ ಕಾರನ್ನು ಅಡ್ಡಲಾಗಿ ನಿಲ್ಲಿಸಿದ್ದಾರೆ. ಆನಂತರ ಕಾರಿನಿಂದ ಇಳಿದ ಮೂವರು ವ್ಯಕ್ತಿಗಳು ಮಾರಾಕಾಸ್ತ್ರಗಳನ್ನು ಹಿಡಿದು ಆಟೋ ಒಳಗಿದ್ದ ಮಹಿಳೆಯರ ಮೇಲೆ ಮಚ್ಚುಗಳಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ಆಟೋದಲ್ಲಿದ್ದವರನ್ನು ಅವಾಚ್ಯವಾಗಿ ನಿಂದಿಸುತ್ತಾ, ನಿಮ್ಮನ್ನು ಕತ್ತರಿಸದೇ ಬಿಡುವುದಿಲ್ಲ ಎಂದು ಕೂಗುತ್ತಾ ಕಾರನ್ನು ಏರಿ ಸ್ಥಳದಿಂದ ಪರಾರಿಯಾಗಿದ್ದಾರೆ.
ನೂರಾರು ಜನರು ಹಾಗೂ ವಾಹನಗಳು ಓಡಾಡುವ ರಾಮಾನುಜ ರಸ್ತೆಯಂತ ಪ್ರಮುಖ ಸ್ಥಳದಲ್ಲಿ ಈ ಘಟನೆ ನಡೆದಿರುವುದರಿಂದ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಸ್ಥಳದಲ್ಲಿದ್ದ ಐವತ್ತಕ್ಕು ಹೆಚ್ಚು ಮಂದಿ ಸಾರ್ವಜನಿಕರು ಅಸಹಾಯಕರಾಗಿ ಘಟನೆಯನ್ನು ನೋಡುತ್ತಾ ನಿಂತಿದುದು ಕಂಡು ಬಂದಿದೆ. ಸಾರ್ವಜನಿಕರು ಕೆ.ಆರ್ ಪೊಲೀಸ್ ಠಾಣೆಯ ಅಧಿಕಾರಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಕೆ.ಆರ್ ಠಾಣಾ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಘಟನೆಗೆ ಕಾರಣರಾದವರ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ ಎನ್ನಲಾಗಿದೆ. ಆದರೆ ಯಾವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬುದು ಪೊಲಿಸರಿಗೆ ಗೊತ್ತಾಗಿಲ್ಲ. ಈ ಸಂಬಂಧ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸುತ್ತಿರುವ ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
ಕೌಟುಂಬಿಕ ಕಲಹ,,,?
ಪೊಲೀಸರು ಹೇಳುವಂತೆ ಘಟನೆಯು ಕೌಟುಂಬಿಕ ಕಲಹವಾಗಿದೆ. ನಗರದ ಚಾಮರಾಜ ಮೊಹಲ್ಲಾ ನಿವಾಸಿ ಯುವತಿಯು ಕೆಲ ದಿನಗಳ ಹಿಂದೆ ತಾನು ಪ್ರೀತಿಸಿದ ಯುವಕನೊಂದಿಗೆ ಮನೆಬಿಟ್ಟು ತೆರಳಿದ್ದಳು ಎನ್ನಲಾಗಿದೆ. ಆಕೆ ಗುರುವಾದ ರಾತ್ರಿ ಆಟೋ ಮೂಲಕ ಬರುವ ವಿಚಾರ ತಿಳಿದ ಸಂಬಂದಿಗಳು ಕಾರಿನಲ್ಲಿ ಬಂದು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…