ಮೈಸೂರು

‌ಮಹಿಳೆಯರಿಗೆ ಪೊಲೀಸ್ ಠಾಣೆ ಬಗ್ಗೆ ಭಯ ಬೇಡ ; ನಾಗಲಕ್ಷ್ಮಿ ಚೌಧರಿ ಸಲಹೆ

ಮೈಸೂರು : ಪೊಲೀಸ್‌ ಠಾಣೆಗಳಿರುವುದು ಮಹಿಳೆಯರ ರಕ್ಷಣೆಗಾಗಿ. ಹೀಗಾಗಿ ಪೊಲೀಸ್‌ ಠಾಣೆ ಎಂದರೆ ಭಯ ಬೇಡ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮಹಿಳೆಯರಿಗೆ ಸಲಹೆ ನೀಡಿದರು.

ನಗರದ ಮಹಾರಾಣಿ ಕಾಲೇಜಿನಲ್ಲಿ ಶನಿವಾರ ನಡೆದ ಮಹಿಳಾ ದಿನಾಚರಣೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಹೆಣ್ಣು ಅತ್ಯಾಚಾರಕ್ಕೆ ಒಳಗಾದಾಗ, ಆ ಹೆಣ್ಣು ಪೊಲೀಸ್‌ ಠಾಣೆಗೆ ಹೋಗಲು ಭಯಪಡುತ್ತೆ. ಈ ಪ್ರವೃತ್ತಿ ನಿಲ್ಲಬೇಕು. ದೇಶದ ಕಾನೂನು ಮಹಿಳೆಯರ ಆತ್ಮರಕ್ಷಣೆಗೆ ಹೆಚ್ಚಿನ ಒತ್ತು ನೀಡಿದೆ. ಠಾಣೆಗಳು ಮಹಿಳೆಯರಿಗೆ ತವರು ಮನೆ ಇದ್ದಂತೆ. ಹೀಗಾಗಿ ಠಾಣೆ ಬಗ್ಗೆ ಭಯ ಪಡದೆ ಭರವಸೆ ಇರಲಿ ಎಂದು ಹೇಳಿದರು.

ಹೆಣ್ಣು ಅಡೆತಡೆಗಳನ್ನು ಮೆಟ್ಟಿ ನಿಲ್ಲುವ ಗುಣ ಬೆಳೆಸಿಕೊಂಡು ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡಬೇಕು. ಶಿಕ್ಷಿತರಾಗಿ ಆರ್ಥಿಕ ಸ್ವಾವಲಂಬಿಗಳಾಗಬೇಕು ಎಂದ ಅವರು ಅನ್ಯಾಯ, ಅತ್ಯಾಚಾರವಾದಾಗ ಹೆಣ್ಣಿನ ಪರ ಸಮಾಜ ಧ್ವನಿಯಾಗಬೇಕು ಎಂದು ಕರೆ ನೀಡಿದರು.

ಹೆಣ್ಣು ಗಂಡಿಗೆ ಪ್ರತ್ಯೇಕ ವೃತ್ತಿಗಳಿಲ್ಲ. ಎಲ್ಲಾ ಕೆಲಸನ್ನು ಎಲ್ಲರೂ ಸಮಾನವಾಗಿ ಮಾಡಬೇಕು ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

4 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

6 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

9 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

12 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

12 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

13 hours ago