ಮೈಸೂರು : ಪೊಲೀಸ್ ಠಾಣೆಗಳಿರುವುದು ಮಹಿಳೆಯರ ರಕ್ಷಣೆಗಾಗಿ. ಹೀಗಾಗಿ ಪೊಲೀಸ್ ಠಾಣೆ ಎಂದರೆ ಭಯ ಬೇಡ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮಹಿಳೆಯರಿಗೆ ಸಲಹೆ ನೀಡಿದರು.
ನಗರದ ಮಹಾರಾಣಿ ಕಾಲೇಜಿನಲ್ಲಿ ಶನಿವಾರ ನಡೆದ ಮಹಿಳಾ ದಿನಾಚರಣೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಹೆಣ್ಣು ಅತ್ಯಾಚಾರಕ್ಕೆ ಒಳಗಾದಾಗ, ಆ ಹೆಣ್ಣು ಪೊಲೀಸ್ ಠಾಣೆಗೆ ಹೋಗಲು ಭಯಪಡುತ್ತೆ. ಈ ಪ್ರವೃತ್ತಿ ನಿಲ್ಲಬೇಕು. ದೇಶದ ಕಾನೂನು ಮಹಿಳೆಯರ ಆತ್ಮರಕ್ಷಣೆಗೆ ಹೆಚ್ಚಿನ ಒತ್ತು ನೀಡಿದೆ. ಠಾಣೆಗಳು ಮಹಿಳೆಯರಿಗೆ ತವರು ಮನೆ ಇದ್ದಂತೆ. ಹೀಗಾಗಿ ಠಾಣೆ ಬಗ್ಗೆ ಭಯ ಪಡದೆ ಭರವಸೆ ಇರಲಿ ಎಂದು ಹೇಳಿದರು.
ಹೆಣ್ಣು ಅಡೆತಡೆಗಳನ್ನು ಮೆಟ್ಟಿ ನಿಲ್ಲುವ ಗುಣ ಬೆಳೆಸಿಕೊಂಡು ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡಬೇಕು. ಶಿಕ್ಷಿತರಾಗಿ ಆರ್ಥಿಕ ಸ್ವಾವಲಂಬಿಗಳಾಗಬೇಕು ಎಂದ ಅವರು ಅನ್ಯಾಯ, ಅತ್ಯಾಚಾರವಾದಾಗ ಹೆಣ್ಣಿನ ಪರ ಸಮಾಜ ಧ್ವನಿಯಾಗಬೇಕು ಎಂದು ಕರೆ ನೀಡಿದರು.
ಹೆಣ್ಣು ಗಂಡಿಗೆ ಪ್ರತ್ಯೇಕ ವೃತ್ತಿಗಳಿಲ್ಲ. ಎಲ್ಲಾ ಕೆಲಸನ್ನು ಎಲ್ಲರೂ ಸಮಾನವಾಗಿ ಮಾಡಬೇಕು ಎಂದು ತಿಳಿಸಿದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…