ಸ್ತನ ಕ್ಯಾನ್ಸರ್ ಜಾಗೃತಿ ಜಾಥಾಗೆ ನಗರದಲ್ಲಿ ಉತ್ತಮ ಪ್ರತಿಕ್ರಿಯೆ
ಮೈಸೂರು: ಮಹಿಳೆಯರನ್ನು ಕಾಡುತ್ತಿರುವ ಸ್ತನ ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ರೋಟರಿ ಮೈಸೂರು ವೆಸ್ಟ್ ಹಾಗೂ ವಿ-ಸಖಿ ಸಂಸ್ಥೆ ವತಿಯಿಂದ ಭಾನುವಾರ ಅಯೋಜಿಸಿದ್ದ ಸೀರೆ ನಡಿಗೆ (ವಾಕಥಾನ್) ಕಾರ್ಯ ಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ವಾಕಥಾನ್ನಲ್ಲಿ ನೂರಾರು ಮಹಿಳೆಯರು ಭಾಗವಹಿಸಿ ಗಮನ ಸೆಳೆದರು.
ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಾಸ್ಥಾನದ ಮುಂಭಾಗದಿಂದ ಸುಮಾರು 300 ಮಹಿಳೆಯರು ವಾಕಥಾನ್ ನಡೆಸಿದರು. ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಸೀರೆ ನಡಿಗೆ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಸ್ತನ ಕ್ಯಾನ್ಸರ್ ಜಗತ್ತಿನ ಕಾಯಿಲೆಯಾಗಿ ಮಾರ್ಪಟ್ಟಿದೆ. ಅರಿವಿನ ಕೊರತೆಯಿಂದ ಹೆಚ್ಚು ಮಹಿಳೆಯರು ಸ್ತನ ಕ್ಯಾನ್ಸರ್ಗೆ ಒಳಗಾಗುತ್ತಿದ್ದಾರೆ. ಎಷ್ಟೋ ಜನ ಹೆಣ್ಣು ಮಕ್ಕಳು ಸಂಕೋಚದಿಂದ ಸ್ತನ ತಪಾಸಣೆ ಮಾಡಿಸಲು ಹಿಂದೇಟು ಹಾಕುತ್ತಾರೆ. ಅಲ್ಲದೆ, ಕಾಯಿಲೆ ಇದೆ ಎಂದು ತಿಳಿದಾಗ ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಇದೀಗ ಆಧುನಿಕ ಚಿಕಿತ್ಸಾ ವ್ಯವಸ್ಥೆಗಳು ಬಂದಿದೆ. ಮಹಿಳೆಯರು ಯಾವುದೇ ರೀತಿ ಭಯ ಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದರು.
ನಂತರ 40 ಮಹಿಳೆಯರಿಗೆ ಉಚಿತವಾಗಿ ಸ್ತನ ಕ್ಯಾನ್ಸರ್ ತಪಾಸಣೆಯನ್ನು ಮಾಡಲಾಯಿತು. ಅಲ್ಲದೆ, ಕ್ಯಾನ್ಸರ್ಗೆ ತುತ್ತಾಗಿರುವ ಮಹಿಳೆಯರಿಗೆ ವಿಗ್ ತಯಾರಿಸುವ ಸಲುವಾಗಿ 8 ಮಹಿಳೆಯರು ಕೇಶದಾನ ಮಾಡಿದರು. ರೋಟರಿ ಕ್ಲಬ್ ಅಧ್ಯಕ್ಷೆ ಎಲಿಜಬೆತ್ ಶಕುಂತಲಾ, ವಿ ಸಖಿ ಅಧ್ಯಕ್ಷೆ ಭಾನು ಆನಂದ್ ಮತ್ತಿತರರು ಭಾಗವಹಿಸಿದ್ದರು.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…