ಮೈಸೂರು

ಸೀರೆ ನಡಿಗೆಯಲ್ಲಿ ಗಮನ ಸೆಳೆದ ಮಹಿಳೆಯರು

ಸ್ತನ ಕ್ಯಾನ್ಸರ್ ಜಾಗೃತಿ ಜಾಥಾಗೆ ನಗರದಲ್ಲಿ ಉತ್ತಮ ಪ್ರತಿಕ್ರಿಯೆ

ಮೈಸೂರು: ಮಹಿಳೆಯರನ್ನು ಕಾಡುತ್ತಿರುವ ಸ್ತನ ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ರೋಟರಿ ಮೈಸೂರು ವೆಸ್ಟ್ ಹಾಗೂ ವಿ-ಸಖಿ ಸಂಸ್ಥೆ ವತಿಯಿಂದ ಭಾನುವಾರ ಅಯೋಜಿಸಿದ್ದ ಸೀರೆ ನಡಿಗೆ (ವಾಕಥಾನ್) ಕಾರ್ಯ ಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ವಾಕಥಾನ್‌ನಲ್ಲಿ ನೂರಾರು ಮಹಿಳೆಯರು ಭಾಗವಹಿಸಿ ಗಮನ ಸೆಳೆದರು.

ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಾಸ್ಥಾನದ ಮುಂಭಾಗದಿಂದ ಸುಮಾರು 300 ಮಹಿಳೆಯರು ವಾಕಥಾನ್ ನಡೆಸಿದರು. ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌  ಸೀರೆ ನಡಿಗೆ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಸ್ತನ ಕ್ಯಾನ್ಸರ್ ಜಗತ್ತಿನ ಕಾಯಿಲೆಯಾಗಿ ಮಾರ್ಪಟ್ಟಿದೆ. ಅರಿವಿನ ಕೊರತೆಯಿಂದ ಹೆಚ್ಚು ಮಹಿಳೆಯರು ಸ್ತನ ಕ್ಯಾನ್ಸರ್‌ಗೆ ಒಳಗಾಗುತ್ತಿದ್ದಾರೆ. ಎಷ್ಟೋ ಜನ ಹೆಣ್ಣು ಮಕ್ಕಳು ಸಂಕೋಚದಿಂದ ಸ್ತನ ತಪಾಸಣೆ ಮಾಡಿಸಲು ಹಿಂದೇಟು ಹಾಕುತ್ತಾರೆ. ಅಲ್ಲದೆ, ಕಾಯಿಲೆ ಇದೆ ಎಂದು ತಿಳಿದಾಗ ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಇದೀಗ ಆಧುನಿಕ ಚಿಕಿತ್ಸಾ ವ್ಯವಸ್ಥೆಗಳು ಬಂದಿದೆ. ಮಹಿಳೆಯರು ಯಾವುದೇ ರೀತಿ ಭಯ ಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದರು.

ನಂತರ 40 ಮಹಿಳೆಯರಿಗೆ ಉಚಿತವಾಗಿ ಸ್ತನ ಕ್ಯಾನ್ಸರ್ ತಪಾಸಣೆಯನ್ನು ಮಾಡಲಾಯಿತು. ಅಲ್ಲದೆ, ಕ್ಯಾನ್ಸರ್‌ಗೆ ತುತ್ತಾಗಿರುವ ಮಹಿಳೆಯರಿಗೆ ವಿಗ್ ತಯಾರಿಸುವ ಸಲುವಾಗಿ 8 ಮಹಿಳೆಯರು ಕೇಶದಾನ ಮಾಡಿದರು. ರೋಟರಿ ಕ್ಲಬ್ ಅಧ್ಯಕ್ಷೆ ಎಲಿಜಬೆತ್ ಶಕುಂತಲಾ, ವಿ ಸಖಿ ಅಧ್ಯಕ್ಷೆ ಭಾನು ಆನಂದ್ ಮತ್ತಿತರರು ಭಾಗವಹಿಸಿದ್ದರು.

andolana

Recent Posts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

7 hours ago

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…

7 hours ago

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

8 hours ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

8 hours ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

8 hours ago

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

9 hours ago