ಸ್ತನ ಕ್ಯಾನ್ಸರ್ ಜಾಗೃತಿ ಜಾಥಾಗೆ ನಗರದಲ್ಲಿ ಉತ್ತಮ ಪ್ರತಿಕ್ರಿಯೆ
ಮೈಸೂರು: ಮಹಿಳೆಯರನ್ನು ಕಾಡುತ್ತಿರುವ ಸ್ತನ ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ರೋಟರಿ ಮೈಸೂರು ವೆಸ್ಟ್ ಹಾಗೂ ವಿ-ಸಖಿ ಸಂಸ್ಥೆ ವತಿಯಿಂದ ಭಾನುವಾರ ಅಯೋಜಿಸಿದ್ದ ಸೀರೆ ನಡಿಗೆ (ವಾಕಥಾನ್) ಕಾರ್ಯ ಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ವಾಕಥಾನ್ನಲ್ಲಿ ನೂರಾರು ಮಹಿಳೆಯರು ಭಾಗವಹಿಸಿ ಗಮನ ಸೆಳೆದರು.
ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಾಸ್ಥಾನದ ಮುಂಭಾಗದಿಂದ ಸುಮಾರು 300 ಮಹಿಳೆಯರು ವಾಕಥಾನ್ ನಡೆಸಿದರು. ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಸೀರೆ ನಡಿಗೆ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಸ್ತನ ಕ್ಯಾನ್ಸರ್ ಜಗತ್ತಿನ ಕಾಯಿಲೆಯಾಗಿ ಮಾರ್ಪಟ್ಟಿದೆ. ಅರಿವಿನ ಕೊರತೆಯಿಂದ ಹೆಚ್ಚು ಮಹಿಳೆಯರು ಸ್ತನ ಕ್ಯಾನ್ಸರ್ಗೆ ಒಳಗಾಗುತ್ತಿದ್ದಾರೆ. ಎಷ್ಟೋ ಜನ ಹೆಣ್ಣು ಮಕ್ಕಳು ಸಂಕೋಚದಿಂದ ಸ್ತನ ತಪಾಸಣೆ ಮಾಡಿಸಲು ಹಿಂದೇಟು ಹಾಕುತ್ತಾರೆ. ಅಲ್ಲದೆ, ಕಾಯಿಲೆ ಇದೆ ಎಂದು ತಿಳಿದಾಗ ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಇದೀಗ ಆಧುನಿಕ ಚಿಕಿತ್ಸಾ ವ್ಯವಸ್ಥೆಗಳು ಬಂದಿದೆ. ಮಹಿಳೆಯರು ಯಾವುದೇ ರೀತಿ ಭಯ ಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದರು.
ನಂತರ 40 ಮಹಿಳೆಯರಿಗೆ ಉಚಿತವಾಗಿ ಸ್ತನ ಕ್ಯಾನ್ಸರ್ ತಪಾಸಣೆಯನ್ನು ಮಾಡಲಾಯಿತು. ಅಲ್ಲದೆ, ಕ್ಯಾನ್ಸರ್ಗೆ ತುತ್ತಾಗಿರುವ ಮಹಿಳೆಯರಿಗೆ ವಿಗ್ ತಯಾರಿಸುವ ಸಲುವಾಗಿ 8 ಮಹಿಳೆಯರು ಕೇಶದಾನ ಮಾಡಿದರು. ರೋಟರಿ ಕ್ಲಬ್ ಅಧ್ಯಕ್ಷೆ ಎಲಿಜಬೆತ್ ಶಕುಂತಲಾ, ವಿ ಸಖಿ ಅಧ್ಯಕ್ಷೆ ಭಾನು ಆನಂದ್ ಮತ್ತಿತರರು ಭಾಗವಹಿಸಿದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…