ಮೈಸೂರು : ಪರಿಸರವಾದಿಗಳು, ರಾಜಮನೆತನದ ವಿರೋಧದ ನಡುವೆಯೂ ಸದ್ದಿಲ್ಲದೆ ಶುರುವಾಗಿ, ಈಗ ಸ್ಥಗಿತಗೊಂಡಿರುವ ಅಭಿವೃದ್ಧಿ ಕಾಮಗಾರಿಯನ್ನು ಸೋಮವಾರದಿಂದ ಪೊಲೀಸ್ ಭದ್ರತೆಯಲ್ಲಿ ಮತ್ತೆ ಆರಂಭಿಸಲಾಗುತ್ತದೆ. ಸಂಘಟನೆಯೊಂದರ ಹೋರಾಟದಿಂದಾಗಿ ಶುಕ್ರವಾರ ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು. ಆದರೆ, ಪ್ರಸಾದ ಯೋಜನೆಯ ಕಾಮಗಾರಿಯನ್ನು ಪೊಲೀಸ್ ಭದ್ರತೆಯಲ್ಲಿ ಸೋಮವಾರ ಪೂರ್ಣ ಪ್ರಮಾಣದಲ್ಲಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಅವರು ತಿಳಿಸಿದ್ದಾರೆ.
ಕೆಲವರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಂಡ ಬಗ್ಗೆ ಪತ್ರಿಕ್ರಿಯೆ ನೀಡಿದ ಅವರು, ಶನಿವಾರವೇ ಕಾಮಗಾರಿ ಆರಂಭಿಸಬೇಕಿತ್ತು. ಆದರೆ ಪೊಲೀಸರು ವಿವಿಧ ಕಾರ್ಯಕ್ರಮಗಳ ಒತ್ತಡದ ಕೆಲಸದಲ್ಲಿ ನಿರತರಾಗಿದ್ದ ಕಾರಣ ಕಾಮಗಾರಿ ಆರಂಭಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಆದರೆ, ಸೋಮವಾರ ಪೊಲೀಸರ ಭದ್ರತೆಯಲ್ಲಿ ಕಾಮಗಾರಿಯನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲಾಗುವುದು. ಸದ್ಯ ಕೆಲವರು ಕಾಮಗಾರಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಒಂದು ವಾರದವರೆಗೆ ಪೊಲೀಸ್ ಭದ್ರತೆಯಲ್ಲಿ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ಈಗಾಗಲೇ ಗುತ್ತಿಗೆದಾರರು ಕಾಮಗಾರಿಗೆ ಅವಶ್ಯವಿರುವ ಕಟ್ಟಡ ನಿರ್ಮಾಣ ವಸ್ತುಗಳನ್ನು ಚಾಮುಂಡಿಬೆಟ್ಟದಲ್ಲಿ ದಾಸ್ತಾನಿಟ್ಟಿದ್ದಾರೆ. ಸೋಮವಾರದಿಂದ ಅದನ್ನು ಬಳಸಿಕೊಂಡು ಕೆಲಸ ಆರಂಭಿಸಲಾಗುವುದು ಎಂದು ಹೇಳಿದರು.
ಹನೂರು : ತಾಲೂಕಿನ ಕುರುಬರ ದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯ ಆಹಾರ…
ಬೆಂಗಳೂರು : ಆರ್ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ…
ಮುಂಬೈ : ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಆಲ್ರೌಂಡರ್ ಶ್ರೇಯಾಂಕಾ ಪಾಟೀಲ್ 5 ವಿಕೆಟ್…
ಬೆಂಗಳೂರು : ಲೋಕಾಯುಕ್ತ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಬ್ಯಾಟರಾಯನಪುರದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದ ಅಬಕಾರಿ ಉಪ ಆಯುಕ್ತ…
ಬೆಂಗಳೂರು : ಮಾದಕ ವಸ್ತು ಜಾಲ ನಿಯಂತ್ರಣದಲ್ಲಿ ಯಾವುದೇ ಲೋಪವನ್ನು ಸಹಿಸಲು ಸಾಧ್ಯವಿಲ್ಲ. ಡ್ರಗ್ಸ್ಗೆ ಕಡಿವಾಣ ಹಾಕಿ, ಮಾದಕ ವಸ್ತು…
ಮೈಸೂರು : ಸಾಮಾಜಿಕ ಬಹಿಷ್ಕಾರ, ಮಾರ್ಯಾದೆಗೇಡು ಹತ್ಯೆ ತಡೆಯಲು ವಿಶೇಷ ಕಾನೂನು ರೂಪಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ…