ಮೈಸೂರು : ಪರಿಸರವಾದಿಗಳು, ರಾಜಮನೆತನದ ವಿರೋಧದ ನಡುವೆಯೂ ಸದ್ದಿಲ್ಲದೆ ಶುರುವಾಗಿ, ಈಗ ಸ್ಥಗಿತಗೊಂಡಿರುವ ಅಭಿವೃದ್ಧಿ ಕಾಮಗಾರಿಯನ್ನು ಸೋಮವಾರದಿಂದ ಪೊಲೀಸ್ ಭದ್ರತೆಯಲ್ಲಿ ಮತ್ತೆ ಆರಂಭಿಸಲಾಗುತ್ತದೆ. ಸಂಘಟನೆಯೊಂದರ ಹೋರಾಟದಿಂದಾಗಿ ಶುಕ್ರವಾರ ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು. ಆದರೆ, ಪ್ರಸಾದ ಯೋಜನೆಯ ಕಾಮಗಾರಿಯನ್ನು ಪೊಲೀಸ್ ಭದ್ರತೆಯಲ್ಲಿ ಸೋಮವಾರ ಪೂರ್ಣ ಪ್ರಮಾಣದಲ್ಲಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಅವರು ತಿಳಿಸಿದ್ದಾರೆ.
ಕೆಲವರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಂಡ ಬಗ್ಗೆ ಪತ್ರಿಕ್ರಿಯೆ ನೀಡಿದ ಅವರು, ಶನಿವಾರವೇ ಕಾಮಗಾರಿ ಆರಂಭಿಸಬೇಕಿತ್ತು. ಆದರೆ ಪೊಲೀಸರು ವಿವಿಧ ಕಾರ್ಯಕ್ರಮಗಳ ಒತ್ತಡದ ಕೆಲಸದಲ್ಲಿ ನಿರತರಾಗಿದ್ದ ಕಾರಣ ಕಾಮಗಾರಿ ಆರಂಭಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಆದರೆ, ಸೋಮವಾರ ಪೊಲೀಸರ ಭದ್ರತೆಯಲ್ಲಿ ಕಾಮಗಾರಿಯನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲಾಗುವುದು. ಸದ್ಯ ಕೆಲವರು ಕಾಮಗಾರಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಒಂದು ವಾರದವರೆಗೆ ಪೊಲೀಸ್ ಭದ್ರತೆಯಲ್ಲಿ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ಈಗಾಗಲೇ ಗುತ್ತಿಗೆದಾರರು ಕಾಮಗಾರಿಗೆ ಅವಶ್ಯವಿರುವ ಕಟ್ಟಡ ನಿರ್ಮಾಣ ವಸ್ತುಗಳನ್ನು ಚಾಮುಂಡಿಬೆಟ್ಟದಲ್ಲಿ ದಾಸ್ತಾನಿಟ್ಟಿದ್ದಾರೆ. ಸೋಮವಾರದಿಂದ ಅದನ್ನು ಬಳಸಿಕೊಂಡು ಕೆಲಸ ಆರಂಭಿಸಲಾಗುವುದು ಎಂದು ಹೇಳಿದರು.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…