ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ವಿಜಯದಶಮಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಮಿಲಿಟರಿ ಹಾಗೂ ವಾಯುಸೇನೆಗೂ ಮನವಿ ಮಾಡಲಾಗುವುದು ಎಂದರು.
ಈ ಬಾರಿ ದಸರಾಗೆ ಪಾರಂಪರಿಕತೆಯ ಜೊತೆಗೆ ಇನ್ನಷ್ಟು ಹೊಸ ರೂಪ ನೀಡಲು ನಿರ್ಧರಿಸಲಾಗಿದೆ. ಪೊಲೀಸ್ ಬ್ಯಾಂಡ್ ಕಾರ್ಯಕ್ರಮಕ್ಕೂ ಹೊಸ ಸ್ಪರ್ಶ ನೀಡಲಾಗುವುದು ಎಂದು ತಿಳಿಸಿದರು.
ಇನ್ನು ದಸರಾ ಸಂದರ್ಭದಲ್ಲಿ 10 ಕೋಟಿಗೂ ಅಧಿಕ ವೆಚ್ಚದಲ್ಲಿ ಸೆಸ್ಕ್ ವತಿಯಿಂದ ದೀಪಾಲಂಕಾರ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಿದರು.




