ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಇಂದು ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಯಿತು.
ವೀರನಹೊಸಹಳ್ಳಿ ಗ್ರಾಮದ ಬಳಿ ಗಜಪಡೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪಶುಸಂಗೋಪನಾ ಸಚಿವ ವೆಂಕಟೇಶ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಿದರು.
ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಒಟ್ಟು 14 ಆನೆಗಳನ್ನು ಆಯ್ಕೆ ಮಾಡಲಾಗಿದ್ದು, ಅದರಲ್ಲಿ ಇಂದು ಅಭಿಮನ್ಯು ನೇತೃತ್ವದ 9 ಆನೆಗಳು ಮೈಸೂರಿಗೆ ಆಗಮಿಸುತ್ತಿವೆ.
ಅಭಿಮನ್ಯು, ಭೀಮ, ಕಂಜನ್, ಧನಂಜಯ, ಪ್ರಶಾಂತ, ಮಹೇಂದ್ರ, ಏಕಲವ್ಯ, ಕಾವೇರಿ ಹಾಗೂ ಲಕ್ಷ್ಮೀ ಸೇರಿ 9 ಆನೆಗಳು ನಾಡಿನತ್ತ ಪಯಣ ಬೆಳೆಸಿವೆ.
ಗಜಪಯಣಕ್ಕೆ ಹತ್ತಾರು ಜಾನಪದ ಕಲಾತಂಡಗಳು ಮೆರುಗು ತಂದವು. ಈ ವೇಳೆ ಗಜಪಯಣ ವೀಕ್ಷಣೆ ಮಾಡಲು ನೂರಾರು ಜನರು ಜಮಾವಣೆಗೊಂಡಿದ್ದರು.
ಗಜಪಯಣ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಜಿ.ಡಿ.ಹರೀಶ್ ಗೌಡ, ಪುಷ್ಪಾ ಅಮರನಾಥ್, ಸೇರಿದಂತೆ ಹಿರಿಯ ಅರಣ್ಯಾಧಿಕಾರಿಗಳು ಭಾಗಿಯಾಗಿದ್ದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…