Mysore
27
broken clouds

Social Media

ಭಾನುವಾರ, 30 ಆಗಸ್ಟ್ 2026
Light
Dark

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಇಂದು ಸಂಜೆಯಿಂದಲೇ ಆನೆಗಳಿಗೆ ತಾಲೀಮು ಆರಂಭ: ಡಿಸಿಎಫ್‌ ಡಾ.ಪ್ರಭುಗೌಡ

ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ ಆನೆಗಳ ತೂಕ ಹೆಚ್ಚಿಸುವುದು ನಮ್ಮ ಆದ್ಯತೆಯಲ್ಲ, ಆನೆಗಳ ಆರೋಗ್ಯ ಕಾಪಾಡುವುದು ಮುಖ್ಯ ಎಂದು ಡಿಸಿಎಫ್ ಪ್ರಭುಗೌಡ ತಿಳಿಸಿದ್ದಾರೆ.

ಇಂದು ಸಂಜೆಯಿಂದಲೇ ಆನೆಗಳ ತಾಲಿಮು ಆರಂಭವಾಗಲಿದ್ದು, ಹಂತ ಹಂತವಾಗಿ ತಾಲಿಮು ನಡೆಸಲಾಗುತ್ತದೆ. ಎಲ್ಲಾ ಆನೆಗಳ ಆರೋಗ್ಯ ಉತ್ತಮವಾಗಿದೆ. ತಾಲಿಮಿನ ಬಳಿಕ ಅಂಬಾರಿ ಹೊರುವ ಆನೆಯನ್ನು ಆಯ್ಕೆ ಮಾಡಲಾಗುತ್ತದೆ. ನಮ್ಮಲ್ಲಿರುವ ಎಲ್ಲಾ ಆನೆಗಳು ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಈಗಿರುವ ಎಲ್ಲಾ ಆನೆಗಳು ಅನುಭವಿ ಆನೆಗಳಾಗಿವೆ. ಆನೆಗಳಿಗೆ ಯಾವ ಪ್ರಮಾಣದಲ್ಲಿ ಆಹಾರ ನೀಡಬೇಕು ಎಂಬುದನ್ನು ನಿರ್ಧರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಆನೆಗಳ ವೀಕ್ಷಣೆಗೆ ಟಿಕೆಟ್ ಇಲ್ಲ: ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್ ವ್ಯವಸ್ಥೆ ಮಾಡಿಲ್ಲ. ಆನೆಗಳ ಬಳಿ ಯಾರೂ ಹೋಗದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ವಿಚಾರದಲ್ಲಿ ಯಾರಾದರೂ ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಫ್‌ ಪ್ರಭುಗೌಡ ಎಚ್ಚರಿಕೆ ನೀಡಿದ್ದಾರೆ.

 

Tags:
error: Content is protected !!